ಬ್ರೇಕಿಂಗ್ ನ್ಯೂಸ್
26-12-23 11:01 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷೆಯ ಐದನೇ ಗ್ಯಾರಂಟಿ ಯೋಜನೆ 'ಯುವ ನಿಧಿ' ನೋಂದಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನೋಂದಣಿ ಮಾಡಿಸಿಕೊಂಡವರಿಗೆ ಜನವರಿ 12ರ ವಿವೇಕಾನಂದ ಜಯಂತಿಯ ದಿನ ಹಣ ಜಮಾ ಆಗಲಿದೆ. ಅದೇ ದಿನ ಉದ್ಘಾಟನಾ ಕಾರ್ಯಕ್ರಮ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಹೇಳಿದರು.
ಕಳೆದ ಸಾಲಿನಲ್ಲಿ ಡಿಪ್ಲೊಮಾ ಇಲ್ಲವೇ ಪದವಿ ಪೂರೈಸಿದ್ದು, ಇನ್ನೂ ಯಾವುದೇ ಉದ್ಯೋಗ ಸಿಗದವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿಪ್ಲೋಮಾ ಹೋಲ್ಡರ್ಗಳಿಗೆ ಮುಂದಿನ ಎರಡು ವರ್ಷ ತಿಂಗಳಿಗೆ 1500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯೋಜನೆ ಇದಾಗಿದೆ. ಯಾವುದೇ ಉದ್ಯೋಗ ಸಿಕ್ಕರೆ ತಕ್ಷಣ ಯೋಜನೆ ಸ್ಥಗಿತಗೊಳಿಸಲು ಅರ್ಜಿ ಸಲ್ಲಿಸಬೇಕು ಎಂದು ಮಾನದಂಡದಲ್ಲಿ ಸೂಚಿಸಲಾಗಿದೆ.
ನರೇಂದ್ರ ಮೋದಿಯವರು ಕಾಂಗ್ರೆಸ್ ಗ್ಯಾರಂಟಿ ಜಾರಿ ಮಾಡೋಕ್ಕಾಗಲ್ಲ ಅಂದಿದ್ದರು. ಗ್ಯಾರಂಟಿ ಜಾರಿ ಮಾಡಿದ್ರೆ ಕರ್ನಾಟಕ ದಿವಾಳಿಯಾಗುತ್ತೆ ಎಂದು ರಾಜಸ್ಥಾನದಲ್ಲಿ ಹೇಳಿಕೆ ನೀಡಿದ್ದರು. 12 ವರ್ಷ ಮುಖ್ಯಮಂತ್ರಿಯಾಗಿ, ಹತ್ತು ವರ್ಷ ಪ್ರಧಾನ ಮಂತ್ರಿ ಆಗಿದ್ದವರು ಈ ಹೇಳಿಕೆ ನೀಡಿದ್ದರು. ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ರಾಜ್ಯ ದಿವಾಳಿ ಆಗಿಲ್ಲ ಎಂದು ಹೇಳಬಯಸುತ್ತೇನೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಗೆ ಸವಾಲು ಹಾಕಿದರು. ನಾವು ಈ ವರ್ಷ ಗ್ಯಾರಂಟಿಗಾಗಿ 39 ಸಾವಿರ ಕೋಟಿ ನೀಡಿದ್ದೇವೆ. ಉಚಿತ ಯೋಜನೆ ನೀಡಿದ ಮೇಲೂ ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಯುವ ನಿಧಿಯಲ್ಲಿ 5 ಲಕ್ಷದ 29 ಸಾವಿರ ಪದವೀಧರರು ಹಾಗೂ ಡಿಪ್ಲೊಮಾ ಹೋಲ್ಡರ್ಗಳಿಗೆ ಯೋಜನೆ ಪಡೆಯಲು ಅವಕಾಶವಿದೆ. ಮಾರ್ಚ್ ಕೊನೆ ವರೆಗೆ 250 ಕೋಟಿ ಖರ್ಚು ಮಾಡಲಿದ್ದೇವೆ ಎಂದು ವಿವರಿಸಿದರು.
Karnataka Chief Minister Siddaramaiah on December 26 launched the registration of the fifth and last poll guarantee ‘Yuva Nidhi’ in Bengaluru offering unemployment assistance to graduates and diploma holders.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm