ಬ್ರೇಕಿಂಗ್ ನ್ಯೂಸ್
26-12-23 11:01 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷೆಯ ಐದನೇ ಗ್ಯಾರಂಟಿ ಯೋಜನೆ 'ಯುವ ನಿಧಿ' ನೋಂದಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನೋಂದಣಿ ಮಾಡಿಸಿಕೊಂಡವರಿಗೆ ಜನವರಿ 12ರ ವಿವೇಕಾನಂದ ಜಯಂತಿಯ ದಿನ ಹಣ ಜಮಾ ಆಗಲಿದೆ. ಅದೇ ದಿನ ಉದ್ಘಾಟನಾ ಕಾರ್ಯಕ್ರಮ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಹೇಳಿದರು.
ಕಳೆದ ಸಾಲಿನಲ್ಲಿ ಡಿಪ್ಲೊಮಾ ಇಲ್ಲವೇ ಪದವಿ ಪೂರೈಸಿದ್ದು, ಇನ್ನೂ ಯಾವುದೇ ಉದ್ಯೋಗ ಸಿಗದವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿಪ್ಲೋಮಾ ಹೋಲ್ಡರ್ಗಳಿಗೆ ಮುಂದಿನ ಎರಡು ವರ್ಷ ತಿಂಗಳಿಗೆ 1500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯೋಜನೆ ಇದಾಗಿದೆ. ಯಾವುದೇ ಉದ್ಯೋಗ ಸಿಕ್ಕರೆ ತಕ್ಷಣ ಯೋಜನೆ ಸ್ಥಗಿತಗೊಳಿಸಲು ಅರ್ಜಿ ಸಲ್ಲಿಸಬೇಕು ಎಂದು ಮಾನದಂಡದಲ್ಲಿ ಸೂಚಿಸಲಾಗಿದೆ.
ನರೇಂದ್ರ ಮೋದಿಯವರು ಕಾಂಗ್ರೆಸ್ ಗ್ಯಾರಂಟಿ ಜಾರಿ ಮಾಡೋಕ್ಕಾಗಲ್ಲ ಅಂದಿದ್ದರು. ಗ್ಯಾರಂಟಿ ಜಾರಿ ಮಾಡಿದ್ರೆ ಕರ್ನಾಟಕ ದಿವಾಳಿಯಾಗುತ್ತೆ ಎಂದು ರಾಜಸ್ಥಾನದಲ್ಲಿ ಹೇಳಿಕೆ ನೀಡಿದ್ದರು. 12 ವರ್ಷ ಮುಖ್ಯಮಂತ್ರಿಯಾಗಿ, ಹತ್ತು ವರ್ಷ ಪ್ರಧಾನ ಮಂತ್ರಿ ಆಗಿದ್ದವರು ಈ ಹೇಳಿಕೆ ನೀಡಿದ್ದರು. ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ರಾಜ್ಯ ದಿವಾಳಿ ಆಗಿಲ್ಲ ಎಂದು ಹೇಳಬಯಸುತ್ತೇನೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಗೆ ಸವಾಲು ಹಾಕಿದರು. ನಾವು ಈ ವರ್ಷ ಗ್ಯಾರಂಟಿಗಾಗಿ 39 ಸಾವಿರ ಕೋಟಿ ನೀಡಿದ್ದೇವೆ. ಉಚಿತ ಯೋಜನೆ ನೀಡಿದ ಮೇಲೂ ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಯುವ ನಿಧಿಯಲ್ಲಿ 5 ಲಕ್ಷದ 29 ಸಾವಿರ ಪದವೀಧರರು ಹಾಗೂ ಡಿಪ್ಲೊಮಾ ಹೋಲ್ಡರ್ಗಳಿಗೆ ಯೋಜನೆ ಪಡೆಯಲು ಅವಕಾಶವಿದೆ. ಮಾರ್ಚ್ ಕೊನೆ ವರೆಗೆ 250 ಕೋಟಿ ಖರ್ಚು ಮಾಡಲಿದ್ದೇವೆ ಎಂದು ವಿವರಿಸಿದರು.
Karnataka Chief Minister Siddaramaiah on December 26 launched the registration of the fifth and last poll guarantee ‘Yuva Nidhi’ in Bengaluru offering unemployment assistance to graduates and diploma holders.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 04:02 pm
HK News Staffer
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm
ಶಿವಮೊಗ್ಗ- ಮಂಗಳೂರಿನಲ್ಲಿ ಐಸಿಸ್ ನೆಟ್ವರ್ಕ್ ; ಹಣಕಾ...
21-04-26 10:02 pm
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm