ಬ್ರೇಕಿಂಗ್ ನ್ಯೂಸ್
27-12-23 12:33 pm HK News Desk ಕರ್ನಾಟಕ
ಮೈಸೂರು, ಡಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಪ್ರತಾಪ್ ಸಿಂಹ ವಿರುದ್ಧ ದೂರು ನೀಡಿದ್ದರು. ಸದ್ಯ ಈ ದೂರಿನನ್ವಯ ಪೊಲೀಸರು ಸಂಸದರ ವಿರುದ್ಧ ಎಫ್ಐಆರ್ (FIR) ದಾಖಲಿಸಿಕೊಂಡಿದ್ದಾರೆ.
ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ್ದ ಸಂಸದರು, ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದರು. ಸಿದ್ದರಾಮಯ್ಯ ಅವರೇ ನಿಮಗೆ ನಿಜವಾಗಲೂ ತಾಖತ್, ಧಮ್ ಇದ್ದರೆ ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ. ಆದರೆ ಈ ರೀತಿಯಾಗಿ ದ್ವೇಷದ ರಾಜಕಾರಣ ಮಾಡಬೇಡಿ ಎಂದು ಗರಂ ಆಗಿದ್ದರು.
ಸಿದ್ದರಾಮಯ್ಯ ಅವರು ಅಭದ್ರತೆಯಿಂದ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ 28 ಜನ ಸಂಸದರು ಇದ್ದಾರೆ. ಆದರೆ ಪ್ರತಾಪ್ ಸಿಂಹನ ಮಾತ್ರ ಟಾರ್ಗೆಟ್ ಮಾಡುತ್ತಾರೆ ಏಕೆ?. ನಾನು ಸೋಮಾರಿ ಸಿದ್ದನ ರೀತಿ ಸುಮ್ಮನೆ ಕುಳಿತುಕೊಂಡು ಜಾತಿ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇನೆ. ಹೀಗಾಗಿ ನಾನೇ ಟಾರ್ಗೆಟ್ ಎಂದು ಕಿಡಿಕಾರಿದ್ದರು.
ಪ್ರತಾಪ್ ಸಿಂಹ ಅವರು ಕೋಮುಗಲಭೆ ನಡೆಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ರಾತ್ರಿಯೇ ಪ್ರತಿಭಟನೆ ನಡೆಸಿದ್ದರು. ಅದರ ಬೆನ್ನಲ್ಲೇ ಪ್ರಕರಣ ದಾಖಲಾಗಿದೆ.
ಸಿದ್ದರಾಮಯ್ಯರವರು ಜಾತಿ ಜಾತಿಗಳ ನಡುವೆ ದ್ವೇಷ ಹರಡಿಸುವ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಆರೋಪವನ್ನು ಮಾಡಿ, ಹಿಂದೂ ಮತ್ತು ಮುಸ್ಲಿಂಗಳ ನಡುವೆ ಕೋಮು ಗಲಭೆ ಉಂಟು ಮಾಡಲು ನಿರಂತರವಾದ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಹಿಂದೂ ಮತ್ತು ಮುಸ್ಲಿಂಮರ ನಡುವೆ ದಳ್ಳುರಿ ಸೃಷ್ಟಿಸುವ ಹೇಳಿಕೆ ನೀಡಿ ಸಾರ್ವಜನಿಕವಾಗಿ ಆಶಾಂತಿಯನ್ನು ಉಂಟು ಮಾಡುವ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಜಯ ಕುಮಾರ್ ನೀಡಿರುವ ದೂರಿನ ಮೇರೆಗೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
An FIR has been registered against Pratap Simha at Devaraja Police Station here for allegedly making derogatory remarks against Chief Minister Siddaramaiah.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm