ಬ್ರೇಕಿಂಗ್ ನ್ಯೂಸ್
19-11-20 11:18 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 19: ಅವಧಿ ಪೂರ್ಣಗೊಂಡರೂ ರಾಜೀನಾಮೆ ನೀಡದ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅವರನ್ನು ಬಿಜೆಪಿ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಸುಜಾತ ಕೃಷ್ಣಪ್ಪ ಅವರನ್ನು ಅಮಾನತು ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಪಕ್ಷದ ತೀರ್ಮಾನ ಉಲ್ಲಂಘಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪ ಸುಜಾತಾ ಅವರ ಮೇಲಿತ್ತು. ಸುಜಾತಾ ಕೃಷ್ಣಪ್ಪ ಅವರಿಂದ ಪಕ್ಷದ ಘನತೆಗೆ ಧಕ್ಕೆ ಉಂಟಾಗಿದೆ. ಈ ಕುರಿತು ಸಮಜಾಯಿಷಿ ನೀಡಲು ಸೂಚಿಸಿದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಪಕ್ಷದ ಆಂತರಿಕ ಒಪ್ಪಂದದಂತೆ ಅಧ್ಯಕ್ಷಗಿರಿಗೆ ಸುಜಾತ ಕೃಷ್ಣಪ್ಪ ರಾಜೀನಾಮೆ ನೀಡಿರಲಿಲ್ಲ. ಹೀಗಾಗಿ ಬುಧವಾರ ಸ್ವಪಕ್ಷಿಯ ಸದಸ್ಯರೇ ಜಿಲ್ಲಾ ಪಂಚಾಯಿತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಅಧ್ಯಕ್ಷೆ ಸುಜಾತ ಕೃಷ್ಣಪ್ಪ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಧಿಕ್ಕಾರ ಕೂಗಿದ್ದರು.
ಪಕ್ಷದ ಆಂತರಿಕ ಒಪ್ಪಂದದಂತೆ ನೀವು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕೆಂದು ಪಟ್ಟು ಹಿಡಿದಿದ್ದರು. ಈ ವೇಳೆ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ವಾಕ್ಸಮರವೂ ನಡೆಯಿತು. ನಂತರ ಬಿಜೆಪಿ ಸದಸ್ಯರು ಸಭೆ ಬಹಿಷ್ಕರಿಸಿ ಹೊರನಡೆದಿದ್ದರು.
ಈ ಮುನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಖುದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೂಚನೆ ನೀಡಿದ್ದರೂ ಸುಜಾತ ಕೃಷ್ಣಪ್ಪ ಸೊಪ್ಪು ಹಾಕಿರಲಿಲ್ಲ. ಇದೀಗ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
Chikmagalur Zilla Panchayath President Sujatha Krishna was terminated from its office for continuing to work without giving resignation.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm