ಬ್ರೇಕಿಂಗ್ ನ್ಯೂಸ್
29-12-23 05:49 pm HK News Desk ಕರ್ನಾಟಕ
ಚಿತ್ರದುರ್ಗ, ಡಿ 29: ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿ ಪಂಜರ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 4 ವರ್ಷದ ಹಿಂದಿನ ಡೆತ್ನೋಟ್ ಇದೀಗ ಐವರ ಸಾವಿನ ಸುಳಿವನ್ನು ಕೊಟ್ಟಿದೆ.
ಜೈಲು ಪಾಲಾಗಿದ್ದಕ್ಕೆ ಮನನೊಂದು ಐವರು ಸಾವಿಗೆ ಶರಣಾಗಿರುವುದು ಬಯಲಾಗಿದೆ. ಸಾವಿಗೂ ಮುನ್ನ ಈ ಐವರು ಡೆತ್ನೋಡ್ ಬರೆದಿಟ್ಟಿದ್ದು, ಅದರಲ್ಲಿ ಕಾರಣವನ್ನು ತಿಳಿಸಿದ್ದಾರೆ.
ಮೃತ ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ದರೋಡೆ ಪ್ರಕರಣ ದಾಖಲಾಗಿತ್ತು. 2013ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ನರೇಂದ್ರ ರೆಡ್ಡಿ ಎಂಜಿನಿಯರ್ ಆಗಿದ್ದರು. ಇದೇ ವರ್ಷ ಬಿಡದಿ ಬಳಿ ಅವರ ವಾಹನವನ್ನು ತಡೆದು ದರೋಡೆ ಕೇಸ್ ದಾಖಲು ಮಾಡಲಾಗಿತ್ತು. ನರೇಂದ್ರ ಅವರು ತಮ್ಮ ಗೆಳೆಯರ ಜೊತೆ ತೆರಳಿ ದರೋಡೆ ಕೇಸಲ್ಲಿ ಭಾಗಿ ಆಗಿದ್ದರು. ಹೀಗಾಗಿ ದರೋಡೆ ಕೇಸಲ್ಲಿ ಕೆಲದಿನ ಜೈಲುವಾಸವನ್ನೂ ಅನುಭವಿಸಿದ್ದರು. ನರೇಂದ್ರರೆಡ್ಡಿ ವಿರುದ್ಧದ ಕೇಸಿನಿಂದ ಮನನೊಂದಿದ್ದ ಕುಟುಂಬ 2019ರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಶರಣಾಗಿದೆ.
ಜಗನ್ನಾಥರೆಡ್ಡಿ ಮನೆಯಲ್ಲಿದ್ದ ಒಂದು ಸಾಕುನಾಯಿ ಸಹ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿ ಪಂಜರ ಪತ್ತೆ ಕೇಸ್ ಸಂಬಂಧಿಸಿದಂತೆ ಸ್ಥಳಕ್ಕೆ ದೌಡಾಯಿಸಿದ್ದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮನೆಯಲ್ಲಿ ಸಾಕಿದ್ದ ನಾಯಿಯೊಂದು ಸಾವಿಗೀಡಾಗಿದ್ದು ಪತ್ತೆಯಾಗಿದೆ.
ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿ ಪಂಜರ ಪತ್ತೆಯಾದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಮೃತ ಜಗನ್ನಾಥ ರೆಡ್ಡಿ ಸಹೋದರನ ಪತ್ನಿ ಕೊಲ್ಲಿಲಕ್ಷ್ಮಿ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಜಗನ್ನಾಥ ರೆಡ್ಡಿ ಕುಟುಂಬಸ್ಥರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸಕಾಲಕ್ಕೆ ಮಕ್ಕಳ ಮದುವೆ ಆಗದಿದ್ದಕ್ಕೆ ಮನನೊಂದಿದ್ದರು. ಮನನೊಂದು ಸಾವಾಗಿರುವ ಶಂಕೆ ವ್ಯಕ್ತಪಡಿಸಿದ ಅವರು, ಹಲವು ವರ್ಷಗಳಿಂದ ನಮ್ಮ ಸಂಪರ್ಕದಲ್ಲಿ ಇರಲಿಲ್ಲ ಎಂದರು.
ಇತ್ತ ಮೃತ ಪ್ರೇಮಕ್ಕ ಸಹೋದರಿ ಲಲಿತಾ ಪ್ರತಿಕ್ರಿಯಿಸಿ, 8 ವರ್ಷದಿಂದ ಅವರು ಸಂಪರ್ಕದಲ್ಲಿ ಇಲ್ಲ. 8 ವರ್ಷಗಳಿಂದ ಫೋನ್ ಮಾಡ್ತಿದ್ದೆ ಸಿಗ್ತಿರಲಿಲ್ಲ. ಎಲ್ಲೋ ಅನಾಥಶ್ರಮಕ್ಕೆ ಸೇರಬಹುದು ಅಂತಾ ಸುಮ್ಮನಾದೆ. ನನ್ನ ತಂಗಿ ಯಾರದ್ದೂ ಮದುವೆ ಮಾಡಲಿಲ್ಲ. ನನ್ನ ತಂಗಿ ಮಾಡಿದ ತಪ್ಪಿಗೆ ಯಾರಿಗೂ ಮದುವೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Skeletal remains of family of 5 found in Chitradurga district, 4 year old death note found, consume poison. As one of the family member was caught in Dacoity case, depressed by this news the entire family consumed poison.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm