ಬ್ರೇಕಿಂಗ್ ನ್ಯೂಸ್
01-01-24 10:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ.1: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ.
ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ನಡುವೆ, ತನ್ನ ಮಗಳನ್ನು ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಪೋಷಕರು ಈ ಹಿಂದೆ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು.
ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕೆಯನ್ನು ದೂಡಿಹಾಕಿ ಸಾವಿಗೆ ಶರಣಾಗಿದ್ದಾನೆಯೇ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕು.
A class 8 student, who had gone to her house to go to a party with her friends, was found dead after falling under a train along with the school bus driver at Bankanakatte in Ajjampura taluk of Chikkamagaluru district.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm