ಬ್ರೇಕಿಂಗ್ ನ್ಯೂಸ್
19-11-20 04:26 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 19: ಬೆಂಗಳೂರು ಮೂಲದ ಉದ್ಯಮಿಯೊಬ್ಬರು ಕೇರಳದ ದೇವಸ್ಥಾನ ಒಂದಕ್ಕೆ 500 ಕೋಟಿ ರೂಪಾಯಿ ದೇಣಿಗೆ ನೀಡಲು ಮುಂದೆ ಬಂದಿದ್ದಾರೆ. ಆದರೆ, ಈ ಬೃಹತ್ ಮೊತ್ತದ ದೇಣಿಗೆ ಪ್ರಸ್ತಾಪ ಕೇಳಿ ಅಚ್ಚರಿಗೊಂಡ ದೇವಸ್ಥಾನದ ಆಡಳಿತ, ಅದನ್ನು ಪಡೆಯಲು ಹೈಕೋರ್ಟ್ ಮೊರೆ ಹೋಗಿದೆ.
ಎರ್ನಾಕುಲಂ ಜಿಲ್ಲೆಯ ಚೋಟ್ಟಾನಿಕ್ಕರ ಭಗವತಿ ದೇವಸ್ಥಾನಕ್ಕೆ ಈ ಬೃಹತ್ ದೇಣಿಗೆ ಪ್ರಸ್ತಾಪ ಬಂದಿರುವುದು. ಕೊಚ್ಚಿನ್ ದೇವಸ್ವಂ ಬೋರ್ಡ್ ಅಡಿ ದೇವಸ್ಥಾನ ಬರುತ್ತಿದ್ದು, ದೇಣಿಗೆ ಪಡೆಯುವುದಕ್ಕಾಗಿ ಹೈಕೋರ್ಟ್ ಅನುಮತಿ ಕೇಳಲು ಮುಂದಾಗಿದೆ. ಬೆಂಗಳೂರಿನಲ್ಲಿ ವಜ್ರದ ವ್ಯಾಪಾರಿಯಾಗಿರುವ ಚಿಕ್ಕಬಳ್ಳಾಪುರ ಮೂಲದ ಗಣ ಶ್ರವಣ್ ಎಂಬವರು, ದೇವಸ್ಥಾನದ ಅಭಿವೃದ್ಧಿಗಾಗಿ ಬೃಹತ್ ಮೊತ್ತದ ದೇಣಿಗೆ ನೀಡಲು ಮುಂದೆ ಬಂದಿದ್ದಾರೆ.
ಗಣ ಶ್ರವಣ್ ಮೂಲತಃ ಮ್ಯೂಸಿಕ್ ಫೀಲ್ಡಲ್ಲಿದ್ದವರು. 20 ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿದ್ದರೂ, ಯಾವುದೇ ಸಾಧನೆ ಮಾಡಲು ಸಾಧ್ಯವಾಗಿರಲಿಲ್ಲ. ನಾಲ್ಕು ವರ್ಷಗಳ ಹಿಂದೆ ಆಧ್ಯಾತ್ಮಿಕ ಗುರುವಿನ ಸಲಹೆಯಂತೆ ಕೇರಳದ ಚೋಟಾನಿಕ್ಕರ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆನಂತರ ಪ್ರತಿ ಬಾರಿ ದೇವಸ್ಥಾನಕ್ಕೆ ಬರತೊಡಗಿದ್ದರು. ಇದೇ ವೇಳೆ, ಗಣ ಶ್ರವಣ್ ಸಂಪತ್ತು ಹೆಚ್ಚತೊಡಗಿದೆ. ಮುಂಬೈ ಮೂಲದ ಸಂಸ್ಥೆಯೊಂದರ ಪಾಲುದಾರಿಕೆಯಲ್ಲಿ ಬೆಂಗಳೂರಿನಲ್ಲಿ ವಜ್ರದ ಜುವೆಲ್ಲರಿ ವ್ಯಾಪಾರದಲ್ಲಿ ತೊಡಗಿದ್ದಾರೆ. ಅದಲ್ಲದೆ, ಕಟ್ಟಡ ನಿರ್ಮಾಣ ಮತ್ತು ಇಂಟೀರಿಯರ್ ಡಿಸೈನ್ ಕ್ಷೇತ್ರದಲ್ಲಿಯೂ ಬೆಂಗಳೂರಿನಲ್ಲಿ ತೊಡಗಿಸಿಕೊಂಡಿದ್ದಾರೆ.
ಭಾರೀ ಲಾಭ ಬಂದಿದ್ದರಿಂದ ಗಣ ಶ್ರವಣ್, ಲಾಭದ ಅಂಶವನ್ನು ದೇವಿಗೆ ಅರ್ಪಿಸಲು ಯೋಚನೆ ಮಾಡಿದ್ದಾರೆ. ಅದರಂತೆ, ಕಳೆದ ವರ್ಷವೇ 500 ಕೋಟಿ ದೇಣಿಗೆಯ ಪ್ರಸ್ತಾಪವನ್ನು ದೇವಸ್ಥಾನದ ಆಡಳಿತದ ಮುಂದಿಟ್ಟಿದ್ದರು. ಆದರೆ, ಕೊರೊನಾ ಕಾರಣದಿಂದಾಗಿ ಅದನ್ನು ಸ್ವೀಕರಿಸುವ ಪ್ರಕ್ರಿಯೆ ಸಾಧ್ಯವಾಗಿರಲಿಲ್ಲ.




ಚೋಟಾನಿಕ್ಕರ ಭಗವತಿ ದೇವಸ್ಥಾನದಲ್ಲಿ 20 ಲಕ್ಷಕ್ಕಿಂತ ಹೆಚ್ಚು ಮೊತ್ತದ ಯಾವುದೇ ಕಾಮಗಾರಿ, ದೇಣಿಗೆ ಸ್ವೀಕರಿಸುವುದಿದ್ದರೂ ದೇವಸ್ವಂ ಬೋರ್ಡ್ ಅನುಮತಿ ಬೇಕು. ಇದೀಗ ಭಾರೀ ಮೊತ್ತದ ದೇಣಿಗೆ ಪ್ರಸ್ತಾಪ ಬಂದಿದ್ದರಿಂದ ದೇವಸ್ವಂ ಬೋರ್ಡ್ ಹೈಕೋರ್ಟ್ ನಲ್ಲಿ ಪ್ರಸ್ತಾಪ ಇಟ್ಟಿದೆ. ಚೋಟಾನಿಕ್ಕರ ಭಗವತಿ ದೇವಸ್ಥಾನ ಕೇರಳದ ಪ್ರಸಿದ್ಧ ಮತ್ತು ಹಳೆಯ ದೇವಸ್ಥಾನಗಳಲ್ಲಿ ಒಂದಾಗಿದ್ದು, ಅಭಿವೃದ್ಧಿ ಕಾರ್ಯಕ್ಕೆ ಮುಂದಾಗಿತ್ತು. ಈ ವಿಚಾರ ತಿಳಿದ ಉದ್ಯಮಿ ತನ್ನ ದೇಣಿಗೆ ನೀಡಲು ಮುಂದೆ ಬಂದಿದ್ದಾರೆ.
Gana Shravan, a Bangalore-based businessman who heads Gana Shravan Companies a devotee has offered to donate a whopping Rs.500 crore to the famed Chottanikkara Bhagavathy temple in Kerala. The offering is for the development of facilities in the temple and in the temple town.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm