ಬ್ರೇಕಿಂಗ್ ನ್ಯೂಸ್
02-01-24 09:19 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 02: ಶ್ರೀರಾಮ ಧರ್ಮದ ಪರ ಕೆಲಸ ಮಾಡಿದ, ಎಲ್ಲರಿಗೂ ನ್ಯಾಯ ಕೊಟ್ಟ. ಆದರೆ ನಿಮ್ಮ ಸಿದ್ದರಾಮಯ್ಯ ಎಲ್ಲರಿಗೂ ನ್ಯಾಯ ಕೊಟ್ಟರಾ ಎಂದು ಮಾಜಿ ಸಚಿವ ಆಂಜನೇಯ ವಿರುದ್ಧ ಸಿ.ಟಿ.ರವಿ ಕಿಡಿಕಾರಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಿಮ್ಮ ಹೆಸರು ಆಂಜನೇಯ; ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಇದ್ದಾನೆಂದು ಹೇಳಿದ್ರಿ, ಪರಿಶಿಷ್ಟ ಜಾತಿ, ಪಂಗಡಕ್ಕೆ ಇಟ್ಟ 11ಸಾವಿರ ಕೋಟಿ ವಾಪಸ್ ತಗೆದುಕೊಂಡ್ರಿ, ವೋಟ್ ಬ್ಯಾಂಕ್ ಗಾಗಿ ಅಲ್ಪಸಂಖ್ಯಾತ ರಿಗೆ 10 ಸಾವಿರ ಕೋಟಿ ಇಟ್ಟರು, ಒಬ್ಬರಿಗೆ ಅನ್ಯಾಯ ಮಾಡುವವರೂ ರಾಮನಿಗೆ ಸಮನಾಗಲು ಸಾಧ್ಯವೇ ಎಂದರು.

ಅಯೋಧ್ಯೆ ಹೋರಾಟದಲ್ಲಿ ಪಾಲ್ಗೊಂಡರೆಂದು 31 ವರ್ಷದ ನಂತರ ಆ ಕಾರ್ಯಕರ್ತರ ಮೇಲೆ ಕೇಸ್ ಹಾಕಿದ್ರಿ, ರಾಮನ ಹೆಸರು ಇಟುಕೊಂಡಿದ್ದಕ್ಕೆ ರಾಮನ ಗುಣ ಬಂದಿದೆಯೆಂದು ಭಾವಿಸಲು ಆಗುತ್ತದೆಯೋ, ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ ಆದರೆ ಗುಣ ಇದೆಯೇ ಎಂದು ಪ್ರಶ್ನಿಸಿದರು.
1992ರ ಕರಸೇವೆಯಲ್ಲಿ ನಾನು ಸೇರಿದಂತೆ ಸುನಿಲ್ ಕುಮಾರ್ ಹಾಗೂ ಅನೇಕರು ಭಾಗವಹಿಸಿದ್ದರು. ನಮಗೆ ಇನ್ನೂ ಆಮಂತ್ರಣ ಬಂದಿಲ್ಲ, ಯಾರಿಗೆ ಆಮಂತ್ರಣ ಕೊಡಬೇಕು ಎಂಬ ನಿರ್ಧಾರ ಮಾಡುವ ಅಧಿಕಾರ ರಾಮಮಂದಿರ ನಿರ್ಮಾಣ ಟ್ರಸ್ಟ್ ಗೆ ಮಾತ್ರವಿದೆ. ಆ ಅಧಿಕಾರ ಪ್ರಧಾನಮಂತ್ರಿಗೂ ಇಲ್ಲ. ಅವರು ನಿರ್ಧಾರ ಮಾಡುತ್ತಾರೆ ಎಂದರು.
ಇನ್ನೂ ಕಾಲಾವಕಾಶ ಇದೆ, ಆಮಂತ್ರಣ ಪತ್ರಿಕೆ ಬರಬಹುದು, ಬರದೇ ಇರಬಹುದು, ಮಂದಿರ ನಿರ್ಮಾಣಕ್ಕೆ ಹೋರಾಟ ಮಾಡಿದವರಿಗೆ ಇನ್ನೂ ಆಮಂತ್ರಣ ಬಂದಿಲ್ಲ ಎಂದರು.
ರಾಮಮಂದಿರ ಆಗಬೇಕು ಎಂದು ಕಾಂಗ್ರೆಸ್ ಯಾವತ್ತು ಬಯಸಿತ್ತು? ಕಾಂಗ್ರೆಸ್ ಬಯಸಿದ್ದರೆ ಸ್ವಾತಂತ್ರ ಭಾರತದಲ್ಲಿ ಹೋರಾಟ ಮಾಡುವ ಪ್ರಮೇಯವೇ ಬರುತ್ತಿರಲಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮಂದಿರ ನಿರ್ಮಾಣ ಆಗುತ್ತಿತ್ತು. ಹೋರಾಟ ಮತ್ತು ಕರಸೇನೆ ಮಾಡುವ ಸಂದರ್ಭ ಬರುತ್ತಿರಲಿಲ್ಲ ಎಂದು ಸಿ.ಟಿ. ರವಿ ಹೇಳಿದರು.
ಸಿದ್ದರಾಮಯ್ಯ ಮಂದಿರ ನಿರ್ಮಾಣ ಹೋರಾಟ ಸಂದರ್ಭದಲ್ಲಿ ಒಂದು ಹೇಳಿಕೆಯೂ ಕೊಟ್ಟಿಲ್ಲ. ಮಾಜಿ ಸಚಿವ ಆಂಜನೇಯ ಹೇಳಿಕೆ ಕೊಟ್ಟಿಲ್ಲ. ಇದರ ಮೇಲೆ ಅವರಿಗೆ ಆಮಂತ್ರಣ ಪತ್ರಿಕೆ ಬರುತ್ತದೋ ಬಿಡುತ್ತದೆಯೋ ಗೊತ್ತಿಲ್ಲ, ಆದರೆ, ಪ್ರತಿ ಮನೆಗೆ ಮಂತ್ರಾಕ್ಷತೆ ಬಂದೇ ಬರುತ್ತದೆ. ಸಿದ್ದರಾಮಯ್ಯ ಮತ್ತು ಆಂಜನೇಯ ಅವರ ಮನೆಗೆ ಅಯೋಧ್ಯೆ ಮಂತ್ರಾಕ್ಷತೆ ತಲುಪುತ್ತದೆ ಎಂದರು.
Ct Ravi slams Cm Siddaramaiah over Ayodhya invitation. Says even I haven't got any invitation so far
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm