ಬ್ರೇಕಿಂಗ್ ನ್ಯೂಸ್
04-01-24 01:39 pm HK NEWS ಕರ್ನಾಟಕ
ಹುಬ್ಬಳ್ಳಿ, ಜ.4: ಅಯೋಧ್ಯೆ ಕರಸೇವಕರ ಬಂಧನ ವಿಚಾರದಲ್ಲಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ, ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ.
ಇನ್ಸ್ ಪೆಕ್ಟರ್ ಮಹಮದ್ ರಫೀಕ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದಲ್ಲದೆ, ಅವರ ಜಾಗಕ್ಕೆ ಪ್ರಭಾರ ಜವಾಬ್ದಾರಿಯಾಗಿ ಬಿಎ ಜಾಧವ್ ಅವರನ್ನು ನೇಮಿಸಲಾಗಿದೆ. ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಬಿಎ ಜಾಧವ್ಗೆ ಪ್ರಭಾರ ಠಾಣಾಧಿಕಾರಿಯಾಗಿ ಹೆಚ್ಚುವರಿ ಅಧಿಕಾರ ನೀಡಿದ್ದಾರೆ.
ಡಿ.29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 31 ವರ್ಷಗಳ ಹಳೆಯ ಪ್ರಕರಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬರುತ್ತಿದ್ದಂತೆ ಠಾಣೆಯ ಇನ್ ಸ್ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸಿದ್ದರು.
ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡುವಾಗ ಬಂಧನ ಮಾಡಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಸಮರ್ಥಿಸಿಕೊಂಡಿದ್ದ ರಾಜ್ಯ ಸರ್ಕಾರ, ಇದೀಗ ಠಾಣೆಯ ಇನ್ಸ್ಪೆಕ್ಟರ್ ರಫೀಕ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದು ಚರ್ಚೆಗೆ ಗ್ರಾಸವಾಗಿದೆ. ಕಾನೂನು ಪ್ರಕಾರ ನಡೆದುಕೊಂಡಿದ್ದರೆ ಠಾಣಾಧುಕಾರಿಯನ್ನು ರಜೆಯಲ್ಲಿ ಕಳಿಸುವುದು, ಅಲ್ಲಿಗೆ ಪ್ರಭಾರಿಯನ್ನು ನೇಮಿಸುವ ಅಗತ್ಯ ಇರಲಿಲ್ಲ. ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಈ ರೀತಿ ಮಾಡಿದೆಯಾ ಅಥವಾ ಆಕ್ರೋಶ ತಣ್ಣಗಾಗಿಸಲು ಈ ಕ್ರಮ ಕೈಗೊಂಡಿದೆಯಾ ಎನ್ನುವ ಪ್ರಶ್ನೆ ಎದುರಾಗಿದೆ.
Hubbali Srikanth Poojari arrest, Inspector Mohammad Rafiq sent on forceful leave. As part of the State-wide protest by the Bharatiya Janata Party leaders against the arrest of activist Srikanth Poojari in a 31-year-old case in connection with the 1992 riots ahead of Babri Masjid demolition, the Kalaburagi district unit of the BJP staged a protest here on Wednesday.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm