ಬ್ರೇಕಿಂಗ್ ನ್ಯೂಸ್
04-01-24 03:31 pm HK NEWS ಕರ್ನಾಟಕ
ವಿಜಯಪುರ, ಜ.4: ಗೋಧ್ರಾ ಮಾದರಿಯ ಘಟನೆ ಮರುಕಳಿಸಬಹುದು ಎಂದು ಹೇಳಿಕೆ ನೀಡಿರುವವರು ಭಯೋತ್ಪಾದಕರು. ಹೇಳಿಕೆ ನೀಡಿ ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ವಾಗ್ದಾಳಿ ಕಿಡಿಕಾರಿದ್ದಾರೆ.
ಈ ರೀತಿ ಹೇಳಿಕೆ ನೀಡುವವರು ಭಯೋತ್ಪಾದಕರು. ಹೇಳಿಕೆಗಳ ಮೂಲಕ ಭಯೋತ್ಪಾದನೆ ಮಾಡಬಾರದು. ಹೇಳಿಕೆ ನೀಡಿ ಭಯ ಹುಟ್ಟಿಸುತ್ತಿದ್ದಾರೆ. ಇವರು ಯಾಕೆ ನೇರವಾಗಿ ಇಲಾಖೆಗಳಿಗೆ ಹೋಗಿ ಮಾಹಿತಿ ನೀಡ್ತಿಲ್ಲ? ಇವರು ಯಾರನ್ನ ರಕ್ಷಣೆ ಮಾಡ್ತಿದ್ದಾರೆ? ಕೇಳಿದ್ರೆ ಹೇಳ್ತೀವಿ ಅನ್ನೋದು ವಿಧ್ವಂಸಕ ಕೃತ್ಯ ನಡೆಯಲಿ ಅಂದಾಗಾಯ್ತಲ್ಲ? ಇವರು ವಿಧ್ವಂಸಕ ಕೃತ್ಯ ನಡೆಸುವವರನ್ನ ರಕ್ಷಣೆ ಮಾಡ್ತಿದ್ದಾರಾ? ಎಂದು ಪೇಜಾವರ ಶ್ರೀ ಪ್ರಶ್ನಿಸಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿ ಇರೋರು ಈ ರೀತಿ ಮಾತನಾಡಬಾರದು. ಈಗ ಭಯ ಹುಟ್ಟಿದೆ, ಈಗ ಭಯೋತ್ಪಾದಕರು ಯಾರು? ಯಾರು ಹೇಳ್ತಿದ್ದಾರೊ ಅವರು ಸ್ವತಃ ಭಯೋತ್ಪಾದಕರು. ರಾಮ ಭಕ್ತರನ್ನ ಹೆದರಿಸುವ ನೆಪದಲ್ಲಿ, ಇಡೀ ದೇಶವನ್ನೆ ಹೆದರಿಸುತ್ತಿದ್ದಾರೆ.
ಕೃತ್ಯ ನಡೆದರೆ ರಾಮಭಕ್ತರ ಮೇಲೆ ಅಷ್ಟೇ ಅಲ್ಲಾ, ಎಲ್ಲರ ಮೇಲೆ ಪರಿಣಾಮ ಬೀರುತ್ತೆ.. ತಮಗೆ ಮಾಹಿತಿ ಇದ್ದರೆ ಅದನ್ನ ಬಹಿರಂಗ ಪಡಿಸಬೇಕು. ಸಂಬಂಧಪಟ್ಟವರಿಗೆ ಹೋಗಿ ಮಾಹಿತಿ ಕೊಡಬೇಕು. ಅದನ್ನ ಬಿಟ್ಟು ಹೀಗೆ ಆಗುತ್ತೆ ಎಂದು ಭಯ ಹುಟ್ಟಿಸೋದು ಅಲ್ಲ. ಇವರು ಯಾರಿಗೆ ಅನುಕೂಲ ಮಾಡಿಕೊಡ್ತಿದ್ದಾರೆ? ರಾಮಭಕ್ತರಿಗೋ, ದುಷ್ಕರ್ಮಿಗಳಿಗೋ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಕರಸೇವಕರ ಬಂಧನ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ತಪ್ಪು ಮಾಡಿದ್ರೆ ತಪ್ಪಿತಸ್ಥರಿದ್ದರೆ ಶಿಕ್ಷೆ ಕೊಡುವುದು ಸರಿ. ಆದ್ರೆ ಇಂತಹ ಸಂದರ್ಭದಲ್ಲಿ ಈ ಘಟನೆ ನಡೆಯುತ್ತಿರುವುದು ಸರಿಯಲ್ಲ. ಇದು ತಪ್ಪು ಸಂದೇಶ ಕೊಡ್ತಾ ಇದೆ. ಹಾಗಾಗಿ ಈ ಬಗ್ಗೆ ಸರಕಾರ ಜಾಗೃತವಾಗಿ ಇರಬೇಕು ಎಂದು ಸಲಹೆ ಮಾಡಿದರು.
Godhra like incident in Karnataka is to create fear says Udupi Pejawar Mutt Seer. Karnataka Congress MLC BK Hariprasad on Wednesday alleged that the BJP was "trying to replicate the Godhra incident", in which 'kar sevaks' (Hindu volunteers) were killed, in Karnataka. He said the Congress government needed to be vigilant and provide ample security to all those who visit Ayodhya.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm