ಬ್ರೇಕಿಂಗ್ ನ್ಯೂಸ್
04-01-24 08:18 pm Mangaluru Correspondent ಕರ್ನಾಟಕ
ಬೆಂಗಳೂರು ಜ 03: ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದು, ಪೂಜೆ ಮಾಡಲು ಒಳಗೆ ಹೋಗಿಲ್ಲ. ಆದರೆ ಮಸೀದಿಗೆ ಕರೆದರೆ ಟೋಪಿ ಹಾಕಿಕೊಂಡು ಓಡುತ್ತಾರೆ. ಕೇಸರಿ ಪೇಟವನ್ನು ಕೂಡ ಅವರು ಹಾಕಿಕೊಳ್ಳುವುದಿಲ್ಲ. ದೇವಸ್ಥಾನದ ಒಳಗೆ ಹೋಗಲು ಹಿಂಜರಿಯುತ್ತಾರೆ. ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ರಾಮನ ಜನ್ಮ ಪ್ರಮಾಣಪತ್ರ ಕೇಳಿದ್ದರು, ರಾಮ ಕಾಲ್ಪನಿಕ ವ್ಯಕ್ತಿ ಎಂದು ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದರು ಎಂದರು.
ಕರಸೇವಕ ಶ್ರೀಕಾಂತ ಪೂಜಾರಿ ಅವರ ವಿರುದ್ಧ ಬೇರೆ ಪ್ರಕರಣಗಳಿವೆ ಎಂದು ಹೇಳುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾಯಕರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡಿದ್ದಾರೆ. ಬೇರೆ ಪ್ರಕರಣಗಳಲ್ಲಿ ಯಾರೂ ಸಿಗದಿದ್ದಾಗ ಶ್ರೀಕಾಂತ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶ್ರೀಕಾಂತ ಅವರು ಗಾಯಗೊಂಡಿದ್ದು, ಬದುಕು ಸಾವಿನ ನಡುವೆ ಹೋರಾಡುತ್ತಿದ್ದಾರೆ. ಅವರನ್ನು ಬಂಧಿಸುವ ಅವಶ್ಯಕತೆ ಏನಿತ್ತು? ರಾಜ್ಯದಲ್ಲಿ ದೀರ್ಘಾವಧಿಯಿಂದ ಬಾಕಿ ಇರುವ ಸುಮಾರು 50-60 ಸಾವಿರ ಹಾಗೂ ಬೆಂಗಳೂರಿನಲ್ಲಿ ಸುಮಾರು 10 ಸಾವಿರ ಪ್ರಕರಣಗಳಿವೆ. ಎಲ್ಲರನ್ನೂ ಬಂಧಿಸಿದರೆ ಜೈಲಿನಲ್ಲಿರಿಸಲು ಜಾಗ ಇರುವುದಿಲ್ಲ.
ಕಾಂಗ್ರೆಸ್ನವರು ಬೇಕಾದವರಿಗೆ ಕಾಫಿ ಕೊಟ್ಟು ಕಳಿಸುತ್ತಾರೆ. ಅವರು ಕ್ರಿಮಿನಲ್ ಎಂದು ಹೇಳುವ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಇಲ್ಲ. ಅವರು ಕ್ರಿಮಿನಲ್ ಎನ್ನುವುದಾದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್, ಶಶಿ ತರೂರ್ ಯಾವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಶ್ನೆ ಮಾಡಿದರು
R. Ashok criticizes According to Siddaramaiah, he enters mosques but not temples. Lately, instead of going inside the temple, he went to the mosque while donning the Muslim headgear. He blasted, saying he needed Muslims and doesn't want Hindus.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm