ಬ್ರೇಕಿಂಗ್ ನ್ಯೂಸ್
05-01-24 01:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.05: ಪ್ರಥಮ ವರ್ಷದ ಎಂಜಿನಿಯರ್ ವಿದ್ಯಾರ್ಥಿ ಡಬಲ್ ಬ್ಯಾರಲ್ ಬಂದೂಕಿ ನಿಂದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮುಕ್ಕೋಡ್ಲು ಗ್ರಾಮದ ಕೆ.ಡಿ.ತಿಮ್ಮಯ್ಯ ಎಂಬವರ ಪುತ್ರ ವಿಶು ಉತ್ತಪ್ಪ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಮೃತ ವಿಶು ಉತ್ತಪ್ಪ ತಂದೆ ಕೆ.ಡಿ.ತಿಮ್ಮಯ್ಯ ಕುಟುಂಬ ಸಮೇತ ಏಳು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ನೈಸ್ ರಸ್ತೆಯ ಟೋಲ್ ನಲ್ಲಿ ಸಂಗ್ರಹವಾದ ಹಣವನ್ನು ಬ್ಯಾಂಕ್ಗೆ ಜಮೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರಿಗೆ ವಿಶು ಉತ್ತಪ್ಪ ಒಬ್ಬನೇ ಮಗ. ಈತ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರ್ ವ್ಯಾಸಂಗ ಮಾಡುತ್ತಿದ್ದ. ತಿಮ್ಮಯ್ಯ ಪರವಾನಗಿ ಹೊಂದಿದ್ದ ಡಬಲ್ ಬ್ಯಾರಲ್ ಬಂದೂಕು ಹೊಂದಿದ್ದು, ಕೆಲಸ ಮಾಡುವ ಸ್ಥಳಕ್ಕೆ ಬಂದೂಕು ಅಗತ್ಯವಿಲ್ಲವಾದರಿಂದ ಮನೆಯಲ್ಲೇ ಇಟ್ಟು ಹೋಗುತ್ತಿದ್ದರು.
ಸಾವಿಗೂ ಮುನ್ನ ಸಾರಿ ಎಂದು ಅಮ್ಮನಿಗೆ ಕರೆ:
ಕೆಲ ದಿನಗಳಿಂದ ವಿಶು ಉತ್ತಪ್ಪ ಅಷ್ಟಾಗಿ ಸಕ್ರಿಯವಾಗಿರಲಿಲ್ಲ. ಮನೆಯಲ್ಲೇ ಮಂಕಾಗಿದ್ದ. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಎಂದು ಹೇಳಲಾಗಿದೆ. ಈ ಮಧ್ಯೆ ಬುಧವಾರ ಮಧ್ಯಾಹ್ನ ತಿಮ್ಮಯ್ಯ ದಂಪತಿ ಸಾಮಾಗ್ರಿ ತರಲು ಹೊರಗಡೆ ಹೋಗಿದ್ದಾರೆ. ಕೆಲ ಸಮಯದ ಬಳಿಕ ತಾಯಿಗೆ ಕರೆ ಮಾಡಿ ಕ್ಷಮಿಸಿ ಎಂದು ಕರೆ ಮಾಡಿದ್ದಾನೆ. ಆಗ ತಾಯಿ, ಯಾವ ವಿಚಾರಕ್ಕೆ ಕ್ಷಮೆ ಕೇಳುವೆ ಎಂದು ಸಮಾಧಾನಪಡಿಸಿದ್ದಾರೆ.
ಆ ನಂತರ ತಂದೆಗೆ ಕರೆ ಮಾಡಿ, “ನಾನು ಇನ್ಮುಂದೆ ಯಾವುದೇ ತಪ್ಪು ಮಾಡುವುದಿಲ್ಲ’ ಎಂದು ಹೇಳಿ, ಕರೆ ಸ್ಥಗಿತಗೊಳಿಸಿದ್ದಾನೆ. ಆ ಬಳಿಕ ಡಬಲ್ ಬ್ಯಾರಲ್ ಬಂದೂಕಿನಿಂದ ಎಡಭಾಗದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಮಾತಿನಿಂದ ಅನುಮಾನಗೊಂಡ ಪೋಷಕರು ಕೂಡಲೇ ಮನೆಗೆ ವಾಪಸ್ ಬಂದಿದ್ದಾರೆ. ಅಷ್ಟರಲ್ಲಿ ಪುತ್ರ ವಿಶು ಉತ್ತಪ್ಪ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ಪೋಷಕರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri 19-year-old student shoots himself in Bengalore after argument with mother over studies. According to police, Vishu Uthappa, a resident of Peenya in north Bengaluru, killed himself around 4 pm on Tuesday, when his parents had gone out to buy groceries. Vishu’s father KD Thammaiah, a native of Madikeri, works as a security staffer at the NICE Road toll plaza, the police said.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm