ಬ್ರೇಕಿಂಗ್ ನ್ಯೂಸ್
05-01-24 10:12 pm Bangalore Correspondent ಕರ್ನಾಟಕ
ಬೆಂಗಳೂರು, ಜ.5: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕ ಸದಸ್ಯ ಪೀಠ, ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ಇದೇ ವೇಳೆ, ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ. ಯತ್ನಾಳ್ ಹಾಗೂ ಸಿಬಿಐ ರಿಟ್ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಅಲ್ಲದೆ ಸಿಬಿಐ ಅರ್ಜಿ ಸಂಬಂಧ ಡಿಕೆ ಶಿವಕುಮಾರ್ಗೆ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೂಕ್ತವೆನಿಸಿದ ವಿಸ್ತೃತ ಪೀಠ ರಚಿಸಬಹುದು ಎಂದು ಏಕ ಸದಸ್ಯ ಪೀಠ ಹೇಳಿದೆ. ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್, ಸಿಬಿಐ ಹಾಗೂ ಶಾಸಕ ಯತ್ನಾಳ್ ಪರ ವಾದ ವಿರೋಧಿಸಿದರು. ಅನುಮತಿ ನೀಡಿದ ನಂತರ ಹಿಂಪಡೆಯುವಂತಿಲ್ಲವೆಂದು ಸಿಬಿಐ ವಾದ ಮಂಡಿಸಿದೆ. ಎರಡೂ ಕಡೆ ವಾದ ಆಲಿಸಿದ ಹೈಕೋರ್ಟ್, ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
The Central Bureau of Investigation (CBI) on Friday moved the High Court of Karnataka questioning the State government’s November 28, 2023, order of withdrawing consent granted to it on September 25, 2019, to probe a ₹74.93-crore disproportionate assets case registered against Deputy Chief Minister D.K. Shivakumar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm