ಬ್ರೇಕಿಂಗ್ ನ್ಯೂಸ್
06-01-24 06:28 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಸೂರ್ಯನ ಕುರಿತ ಅಧ್ಯಯನಕ್ಕಾಗಿ ಭಾರತದಿಂದ ಮೊದಲ ಬಾರಿಗೆ ಕಳಿಸಲ್ಪಟ್ಟಿದ್ದ ಆದಿತ್ಯ ಎಲ್- 1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ನಿಗದಿತ ಕಕ್ಷೆ ತಲುಪಿದ್ದು, ಭಾರತ ಅಂತರಿಕ್ಷ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ.
ಆದಿತ್ಯ ಎಲ್-1 ನಿಗದಿತ ಕಕ್ಷೆ ಸೇರಿದ ಬಗ್ಗೆ ಇಸ್ರೋ ಅಧಿಕೃತವಾಗಿ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ. 15 ಲಕ್ಷ ಕಿಮೀ ಪ್ರಯಾಣಿಸಿ ನಿಗದಿತ ಕಕ್ಷೆ ಸೇರಿದ್ದು, ಸೂರ್ಯನ ಕುರಿತ ವಿಸ್ಮಯಗಳನ್ನು ಭೂಮಿಯ ಜೊತೆಗೆ ಹಂಚಿಕೊಳ್ಳಲಿದೆ ಎಂದು ತಿಳಿಸಿದೆ. ಇಸ್ರೋ ಸಾಧನೆಯನ್ನು ಅಭಿನಂದಿಸಿರುವ ಪ್ರಧಾನಿ ಮೋದಿ, ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಇದಕ್ಕೆ ಕಾರಣವಾದ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟಂಬರ್ 2ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್-1 ಹೊತ್ತ ಬಾಹ್ಯಾಕಾಶ ನೌಕೆ ಗಗನಕ್ಕೆ ಹಾರಿತ್ತು. ನಾಲ್ಕು ತಿಂಗಳ ಸತತ ಯಾನದ ಬಳಿಕ 15 ಲಕ್ಷ ಕಿಮೀ ದೂರದ ಕಕ್ಷೆಯನ್ನು ತಲುಪಿದೆ. 15 ಲಕ್ಷ ಕಿಮೀ ದೂರದ ಈ ಕಕ್ಷೆ ಸೂರ್ಯ ಮತ್ತು ಭೂಮಿ ನಡುವಿನ ಒಟ್ಟು ದೂರದ ಒಂದನೇ ಭಾಗವಾಗಿದ್ದು, ಅಲ್ಲಿದ್ದುಕೊಂಡೇ ಸೂರ್ಯನ ಕುರಿತು ಅಧ್ಯಯನ ನಡೆಸಲಿದೆ. ಈ ಕಕ್ಷೆಯನ್ನು ವೈಜ್ಞಾನಿಕ ಭಾಷೆಯಲ್ಲಿ ಲ್ಯಾಂಗ್ರೇಜ್ ಪಾಯಿಂಟ್ ಎಂದು ಕರೆಯಲಾಗುತ್ತದೆ.
ಆದಿತ್ಯ ಎಲ್- 1 ಸಂಪೂರ್ಣ ದೇಶೀಯವಾಗಿ ನಿರ್ಮಿಸಲಾದ ಬಾಹ್ಯಾಕಾಶ ನೌಕೆಯಾಗಿದ್ದು, ಇದರಲ್ಲಿ ಒಟ್ಟು ಏಳು ಮಾದರಿಯ ಉಪಕರಣಗಳಿವೆ. ಸೂರ್ಯ ಬಿಡುಗಡೆಗೊಳಿಸುವ ಕಿರಣಗಳು, ಪ್ಲಾಸ್ಮಾ, ಸೌರ ಜ್ವಾಲೆಗಳ ಬಗ್ಗೆ ಅಧ್ಯಯನ ನಡೆಸಲಿದ್ದು, ಕಾಲ ಕಾಲಕ್ಕೆ ಇಸ್ರೋಗೆ ಮಾಹಿತಿ ನೀಡಲಿದೆ.
Aditya L1, the Indian Space Research Organisation's (ISRO) maiden solar mission, successfully entered its final manoeuvre to reach its destination and injected into its final orbit today.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm