ಬ್ರೇಕಿಂಗ್ ನ್ಯೂಸ್
08-01-24 02:52 pm HK News Desk ಕರ್ನಾಟಕ
ಬೆಳಗಾವಿ, ಜ.8: ದೇವಸ್ಥಾನ ಒಡೆದು ಮಸೀದಿ ಕಟ್ಟಿದ ಮುಸ್ಲಿಮರು ತಾವಾಗೇ ಅವನ್ನು ಕಿತ್ತು ಹಾಕಬೇಕು. ಇಲ್ಲವಾದ್ರೆ ರಾಮನ ಭಕ್ತರು ನಾವು ಮಸೀದಿ ಕಿತ್ತು ಹಾಕುತ್ತೇವೆ ಎಂದು ಕೆ.ಎಸ್.ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, 500 ವರ್ಷದ ಕೆಳಗೆ ರಾಮ ಹುಟ್ಟಿದ ಜಾಗದಲ್ಲಿದ್ದ ದೇವಸ್ಥಾನ ಕಿತ್ತು ಹಾಕಿದ್ದರು. ಬಾಬರ್ ನಂತವನು ಬಂದು ಬಾಬ್ರಿ ಮಸೀದಿ ಕಟ್ಟಿದ್ದ. ಬಾಬ್ರಿ ಮಸೀದಿ ಅಂದ್ರೆ ಹೇಗೆ? ಈಗ ಯಾರಾದ್ರೂ ಮಂದಿರ ಕೆಡವಿ ಮಸೀದಿ ಕಟ್ಟಿದರೆ ಅವರಪ್ಪನಿಗೆ ಹುಟ್ಟಿದೋನು ಅಂತ ಕರೀತಿನಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಅರ್ಧ ಮಸೀದಿ ಹೇಗೆ ಬಂತು? ಮಥುರಾದಲ್ಲಿ ಅರ್ಧ ಮಸೀದಿ ಹೇಗೆ ಬಂತು? ಲಾಠಿ ಗೋಲಿ ಖಾಯೆಂಗೆ ಮಂದಿರ ವಹಿ ಬನಾಯೇಂಗೆ ಎಂದು ಕೂಗ್ತಿದ್ದೆವು. ಇನ್ನೆರಡು ದೇವಸ್ಥಾನಗಳಿಗೆ ಕೋರ್ಟ್ ಆದೇಶ ನೀಡಿದೆ. ಅಲ್ಲಿರುವ ಮಸೀದಿಗಳು ಧ್ವಂಸ ಆಗುತ್ತೆ, ದೇವಸ್ಥಾನ ತಲೆ ಎತ್ತುತ್ತದೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿದ ಮುಸ್ಲಿಮರು ನೀವಾಗಿ ನೀವೇ ಕಿತ್ತು ಹಾಕಬೇಕು. ಇಲ್ಲವಾದ್ರೆ ರಾಮನ ಭಕ್ತರು ನಾವು ಮಸೀದಿ ಕಿತ್ತು ಹಾಕುತ್ತೇವೆ ಎಂದಿದ್ದಾರೆ.
ಸಿದ್ದರಾಮಯ್ಯ ನಾವು ಜಾತ್ಯತೀತವಾದಿಗಳು ಅಂತಾರೆ. ನಾವು ನಿಮಗಿಂತ ಜಾತ್ಯತೀತವಾದಿಗಳು. ಹಿಂದೂ ಮುಸ್ಲಿಂ ಅನ್ಯೋನ್ಯವಾಗಿರಬೇಕು ಎನ್ನುವವರು ನಾವು. ನೀವು ನಮಾಜ್ ಮಾಡ್ಕೊಳ್ಳಿ, ನಾವು ಅದರ ತಂಟೆಗೆ ಬರಲ್ಲ. ಬಾಬರ್ ಕಟ್ಟಡ ಈ ದೇಶದ ಜನರಿಗೆ ನೀವು ಗುಲಾಮರಾಗಿದ್ದಿರಿ ಅಂತ ಹೇಳ್ತಿತ್ತು. ನೀವಾಗಿ ನೀವೇ ಮಥುರಾ ಹಾಗೂ ಕೃಷ್ಣಾದ ಮಸೀದಿ ತೆಗೆಯಿರಿ. ತೆಗೆಯದಿದ್ದರೆ ಕೊಲೆಗಳಾಗುತ್ತೊ ಇನ್ನೇನಾಗುತ್ತೊ ಗೊತ್ತಿಲ್ಲ. ಅಧಿಕಾರದಾಸೆಗೆ ಪಾಕಿಸ್ತಾನವನ್ನು ನೆಹರೂ ಮಾಡಿದರು. ಈ ದೇಶದಲ್ಲಿ ಈಗಾಗಲೇ ತ್ರಿವಳಿ ತಲಾಕ್ ಬಂದಿದೆ. ಒಂದು ಗಂಡಿಗೆ ಒಂದು ಹೆಣ್ಣು ಎಂದು ಸಂದೇಶ ಸಾರಿದೆ. ನಮಗೆ ಒಂದು ಹೆಣ್ಣು ಒಂದು ಗಂಡು ಇತ್ತು. ಆದರೆ ಮುಸ್ಲಿಮರಿಗೆ ಹಮ್ ಪಾಂಚ್ ಹಮ್ಕೊ ಪಚ್ಚಿಸ್ ಎಂಬಂತಾಗಿದೆ.
ಗೋವು ನಮ್ಮ ತಾಯಿ. ಗೋಹತ್ಯೆ ನಿಷೇಧ ಮಾಡಿದ್ದೀವಿ. ಗೋಹತ್ಯೆ ನಿಷೇಧ ಕಾಯ್ದೆಯನ್ನು ತಾಕತ್ತಿದ್ದರೆ ಹಿಂಪಡೆಯಿರಿ. ಅದನ್ನ ನಾವು ಹಿಂದೆ ತೆಗೆದುಕೊಳ್ಳಲು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
KS Eshwarappa, former Karnataka Chief Minister and senior Bharatiya Janata Party (BJP) leader, on Sunday again warned the Muslims of dire consequences if they did not vacate the mosques allegedly constructed on demolished temple lands.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm