ಬ್ರೇಕಿಂಗ್ ನ್ಯೂಸ್
08-01-24 07:18 pm HK News Desk ಕರ್ನಾಟಕ
Photo credits : Tv 9 Kannada
ಗದಗ, ಜ 08: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಅಭಿಮಾನಿಗಳಲ್ಲಿ ಸೂತಕದ ಛಾಯೆ ಆವರಿಸಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಅಭಿಮಾನಿಗಳು ಕಟೌಟ್ ನಿಲ್ಲಿಸುವ ವೇಳೆ ಕರೆಂಟ್ ಶಾಕ್ ಹೊಡೆದು ಮೂವರು ಅಭಿಮಾನಿಗಳು ಮೃತಪಟ್ಟಿದ್ರು. ಸುದ್ದಿ ತಿಳಿಯುತ್ತಿದ್ದಂತೆ ಶೂಟಿಂಗ್ ಕ್ಯಾನ್ಸಲ್ ಮಾಡಿ ನಟ ಯಶ್ ಕೂಡ ಗದಗಕ್ಕೆ ಬಂದಿದ್ದಾರೆ.
ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಯಶ್, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಟಗಿಗೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಶೂಟಿಂಗ್ ಬಿಟ್ಟು ಗದಗಕ್ಕೆ ಓಡೋಡಿ ಬಂದ ಯಶ್ ಮೊದಲು ಮೃತ ಮುರಳಿ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಕಿಂಗ್ ಸ್ಟಾರ್ ಯಶ್ ನೋಡಲು ಅಕ್ಕ-ಪಕ್ಕದ ಊರುಗಳಿಂದ ಜನಸಾಗರವೆ ಹರಿದು ಬಂದಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ರು.

ವಿದ್ಯುತ್ ಸ್ಪರ್ಶಿಸಿ ಮೂವರ ಸಾವು ;
ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಬರ್ತ್ಡೇ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದರು. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಹರಿಜನ, ಪ್ರಕಾಶ ಮ್ಯಾಗೇರಿ, ದೀಪಕ ಹರಿಜನ ಎಂಬುವರಿಗೆ ಗಂಭೀರ ಗಾಯಗಳಾಗಿವೆ.


ಯಶ್ ಬರಬೇಕು ಎಂದು ಅಭಿಮಾನಿಗಳ ಪಟ್ಟು ;
ಮೃತರ ಕುಟುಂಬಕ್ಕೆ ಸಾಂತ್ವನ ಹೇಳಬೇಕು, ಪಟ್ಟು ಹಿಡಿದ ಅಭಿಮಾನಿಗಳು ಸೂರಣಗಿ ಗ್ರಾಮಕ್ಕೆ ನಟ ಯಶ್ ಬರಬೇಕೆಂದು ಎಂಬ ಆಗ್ರಹ ಕೇಳಿ ಬಂದಿದೆ. ಯಶ್ ನಮ್ಮೂರಿಗೆ ಬರಬೇಕು. ಬಂದು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು ಎಂದು ಮೃತ ಯುವಕರ ಗೆಳೆಯ ಪ್ರಕಾಶ ಮ್ಯಾಗೇರಿ ಆಗ್ರಹಿಸಿದ್ದರು. ಆಸ್ಪತ್ರೆಗೆ ಶಾಸಕ ಚಂದ್ರು ಲಮಾಣಿ ಭೇಟಿ ನೀಡಿ ಗಾಯಾಳುಗಳ ಜೊತೆ ಮಾತನಾಡಿ ಮೃತರ ಕುಟುಂಬಗಳಿಗೆ ಅವರು ಸಾಂತ್ವನ ಹೇಳಿದ್ದಾರೆ.
2 ಲಕ್ಷ ಪರಿಹಾರ, ಗಾಯಾಳುಗಳಿಗೆ 50 ಸಾವಿರ ;
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು ಎಂದು ಟ್ವೀಟ್ ಮಾಡಿದ್ದಾರೆ.
ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
3 fans electrocuted on Yash Birthday, Actor Yash reaches Gadag consoles family members. Three men were electrocuted in Karnataka’s Gadag district early on Monday when they were installing a flex to celebrate Kannada film actor Yash’s birthday.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm