ಬ್ರೇಕಿಂಗ್ ನ್ಯೂಸ್
08-01-24 10:21 pm Bangalore Correspondent ಕರ್ನಾಟಕ
ಬೆಂಗಳೂರು, ಜ 08: ಸಿನಿಮಾ ಸಕ್ಸಸ್ ಪಾರ್ಟಿಯನ್ನು ಅವಧಿ ಮೀರಿ ಬೆಳಗಿನ ಜಾವದವರೆಗೆ ಮಾಡಿದ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ 8 ಮಂದಿಗೆ ಹಾಗೂ ಕರ್ತವ್ಯಲೋಪವೆಸಗಿದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಬೆಂಗಳೂರು ಪೊಲೀಸ್ ಇಲಾಖೆ ತನಿಖೆಗೆ ಆದೇಶಿಸಿದೆ.
ಈ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಸೈದುಲು ಅದಾವತ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಎಫ್ಐಆರ್ ದಾಖಲಿಸಿರುವ ಪ್ರತಿಯನ್ನು ತೋರಿಸಿದರು. ಅಲ್ಲದೆ ಚಿತ್ರತಂಡಕ್ಕೆ ನೀಡಿರುವ ನೊಟೀಸ್ ಮತ್ತು ಅದರ ಬಗ್ಗೆ ತನಿಖೆ ನಡೆಸುವಂತೆ ಮಲ್ಲೇಶ್ವರಂ ಎಸಿಪಿಗೆ ಸೂಚಿಸಲಾಗಿದೆ ಎಂದರು. ಜನವರಿ 3ರಂದು ರಾತ್ರಿಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಸುಬ್ರಹ್ಮಣ್ಯ ನಗರ ಠಾಣೆಯ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಮತ್ತು ನಾಲ್ವರು ಕಾನ್ ಸ್ಟೇಬಲ್ ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.


ಎಫ್ಐಆರ್ ನಲ್ಲಿರುವುದೇನು?:
ಅಬಕಾರಿ ಕಾಯಿದೆ ಷರತ್ತುಗಳ ಪ್ರಕಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮಾತ್ರ ರೆಸ್ಟೋಬಾರ್ ತೆರೆಯಲು ಅವಕಾಶವಿದೆ.
ಆದರೆ ಜಟ್ಲಾಗ್ ರೆಸ್ಟೋಬಾರ್ ಈ ನಿಮಯಮ ಉಲ್ಲಂಘಿಸಿ ಬೆಳಗಿನ ಜಾವ 3.30ರವರೆಗೂ ಪಾರ್ಟಿ ಮಾಡಲು ಸೆಲೆಬ್ರಿಟಿಗಳಿಗೆ ಅವಕಾಶ ಕೊಟ್ಟಿತ್ತು. ರೆಸ್ಟೋಬಾರ್ ಬೆಳಗ್ಗಿನ ಜಾವ 3 ಗಂಟೆಯಾದರೂ ತೆಗೆದೇ ಇದ್ದ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ ನಗರ ಠಾಣೆಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಜಟ್ಲಾಗ್ ರೆಸ್ಟೋಬಾರ್ ಮೇಲೆ ದಾಳಿ ನಡೆಸಿದ್ದ ಪೊಲೀಸರು ಕೂಡಲೇ ಬಾರ್ ಕ್ಲೋಸ್ ಮಾಡಿಸಿ 3.30ರ ಸುಮಾರಿಗೆ ಜೆಟ್ಲಾಗ್ ನಲ್ಲಿ ಪಾರ್ಟಿ ಮಾಡ್ತಿದ್ದ ಸೆಲೆಬ್ರಿಟಿಗಳನ್ನು ಮನೆಗೆ ಕಳುಹಿಸಿದ್ದರು.
ಜನವರಿ 4ರ ಬೆಳಗಿನ ಜಾವದವರೆಗೆ ಪಾರ್ಟಿ ಹೇಗೆ ನಡೆಯಿತು ಎಂಬುದರ ಕುರಿತು ವಿವರಗಳನ್ನು ಒದಗಿಸುವಂತೆ ಪೊಲೀಸರನ್ನು ಕೇಳಲಾಗಿದೆ.
ಜೆಟ್ ಲ್ಯಾಗ್ ಪಬ್ಗೆ ಏಕೆ ತಡವಾಗಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಯಿತು ಎಂದು ವಿವರಣೆ ನೀಡುವಂತೆ ಸೂಚಿಸಲಾಗಿದೆ ಎಂದು ಡಿಸಿಪಿ ಸೈದುಲ್ ಅದಾವತ್ ತಿಳಿಸಿದ್ದಾರೆ.
ಘಟನೆ ಬೆಳಕಿಗೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂಬ ವಿವರಣೆ ನೀಡುವಂತೆ ಪೊಲೀಸರನ್ನೂ ಕೇಳಲಾಗಿದೆ. ಇತ್ತೀಚೆಗೆ ತೆರೆಕಂಡ ಕನ್ನಡದ ಸೂಪರ್ಹಿಟ್ ಸಿನಿಮಾ ‘ಕಾಟೇರ’ ತಂಡ ಈ ಸಕ್ಸಸ್ ಪಾರ್ಟಿ ಆಯೋಜಿಸಿತ್ತು.
ನಟ ದರ್ಶನ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟರಾದ ನಿನಾಸಂ ಸತೀಶ್, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್ ಹಾಗೂ ಚಿಕ್ಕಣ್ಣ ಅವರಿಗೆ ಪ್ರಧಾನವಾಗಿ ನೋಟಿಸ್ ಜಾರಿ ಮಾಡಲಾಗಿದೆ.
FIR Against Kannada Actor Darshan, 8 Others For Partying Late At Jetlag Pub and bar In Bengaluru, Subramanya Nagar Police in trouble for allowing permission till morning 3:30. DCP Saidulu Adavath has ordered enquiry against Subramanya Nagar station inspector and others.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm