ಬ್ರೇಕಿಂಗ್ ನ್ಯೂಸ್
09-01-24 08:51 pm Bangalore Correspondent ಕರ್ನಾಟಕ
ಬೆಂಗಳೂರು, ಜ 09: ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್, ಲೋಕೋಪಯೋಗಿ ಇಲಾಖೆಯ ಕಟ್ಟಡಗಳ ವೃತ್ತದ ಸೂಪರಿಂಟೆಂಡಿಂಗ್ ಎಂಜಿನಿಯರ್ ಎನ್. ಸತೀಶ್ ಬಾಬು ಸೇರಿದಂತೆ ಐವರು ಅಧಿಕಾರಿಗಳು ಹಾಗೂ ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎಸ್. ಸುರೇಶ್ ಮನೆಗಳ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಕುಂದಾಣ ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಿ.ಎಂ. ಪದ್ಮನಾಭ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೈಯದ್ ಮುನೀರ್, ಬಿಬಿಎಂಪಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಮಂಜೇಶ್ ಬಿ. ದಾಳಿಗೊಳಗಾದ ಇತರರು.

ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಆರು ಮಂದಿಯ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು, ರಾಮನಗರ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳ 30 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿಮಾಡಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಮನೆಗಳು, ಕಚೇರಿಗಳು, ಸಂಬಂಧಿಕರು ಮತ್ತು ಬೇನಾಮಿ ವ್ಯಕ್ತಿಗಳ ಮನೆಗಳಲ್ಲಿ ಶೋಧ ನಡೆಸಲಾಗುತ್ತಿದೆ.
ಕೆಲ ದಿನಗಳ ಹಿಂದೆ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಕಳೆದ ಒಂದೂವರೆ ತಿಂಗಳಿನಿಂದ ಅಮಾನತಿನಲ್ಲಿದ್ದರು. ಈಗ ಆತನ ಮನೆಯ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಹಲವು ಆಸ್ತಿಗಳನ್ನ ಬಯಲಿಗೆಳೆದಿದ್ದಾರೆ. ನಾಗರಾಜ್ ಈ ಹಿಂದೆ ವಾಣಿಜ್ಯ ಲೈಸೆನ್ಸ್ ಕೊಡುವ ವಿಚಾರಕ್ಕೆ 7.50 ಲಕ್ಷ ರೂ. ಲಂಚ ಕೇಳಿದ್ದರು. ನಾಗರಾಜ್ ಪರವಾಗಿ ಡ್ರೈವರ್ ಮುರಳಿಕೃಷ್ಣ 7 ಲಕ್ಷ ರೂ. ಪಡೆದಿದ್ದ, ಹಣ ಪಡೆಯುವಾಗಲೇ ಸಿಕ್ಕಿಬಿದ್ದಿದ್ದರಿಂದ ನಾಗರಾಜ್ ಅವರನ್ನ ಒಂದೂವರೆ ತಿಂಗಳಿನಿಂದ ಅಮಾನತ್ತಿನಲ್ಲಿಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಇದೀಗ ನಾಗರಾಜ್ಗೆ ಸೇರಿದ ಬಳ್ಳಾರಿಯ 7 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಈ ವೇಳೆ ನಾಗರಾಜ್ ಹೆಸರಲ್ಲಿ 9 ಸೈಟ್ಗಳು, 3 ಮನೆಗಳು, 3 ಪೆಟ್ರೋಲ್ ಬಂಕ್, ಕೃಷಿ ಜಮೀನು, ಶಿಕ್ಷಣ ಸಂಸ್ಥೆಗಳು ಪತ್ತೆಯಾಗಿದೆ.
ಕುಂದಾಣ ಗ್ರಾಮ ಪಂಚಾಯತ್ನ ಪಿಡಿಓ ಪದ್ಮನಾಭ್ ಎಂಬವರ ಮನೆಯ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಪ್ತಗಿರಿ ಲೇಔಟ್ ಬಳಿ AGB ಲೇಔಟ್ನಲ್ಲಿ 4 ಮಹಡಿಗಳ ಒಂದು ಮನೆ, ತುಮಕೂರು ಜಿಲ್ಲೆ ಅನುಪನಹಳ್ಳಿಯಲ್ಲಿ ಫಾರ್ಮ್ ಹೌಸ್ ಹೊಂದಿರುವ 5 ಎಕರೆ ಕೃಷಿ ಭೂಮಿ, ಸೋಂಪುರದಲ್ಲಿ ವಾಣಿಜ್ಯ ಕಟ್ಟಡ, ದಾಬಸ್ಪೇಟೆ, ಸೋಂಪುರದಲ್ಲಿ ಕೈಗಾರಿಕಾ ಶೆಡ್ ಪದ್ಮಾನಾಭ್ ಹೆಸರಿನಲ್ಲಿವೆ.
ಬೆಂಗಳೂರಿನ ಬಿಬಿಎಂಪಿ ಅಧಿಕಾರಿ ಮಂಜೇಶ್ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಮಂಡ್ಯದಲ್ಲಿ ಮೂರು ಕಡೆ, ಮಳವಳ್ಳಿ ತಾಲೂಕಿನ ಹಲಗೂರು ಹಾಗೂ ಗುಂಡಾಪುರದಲ್ಲಿ ಮಂಜೇಶ್ ಸಂಬಂಧಿ ಸುರೇಂದ್ರ ಎಂಬವವರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮದ್ದೂರಿನ ಎಸ್.ಐ.ಕೋಡಿಹಳ್ಳಿಯಲ್ಲಿರುವ ಮಂಜೇಶ್ ಅಜ್ಜಿಯ ಮನೆಯ ಮೇಲೂ ದಾಳಿ ನಡೆಸಲಾಗಿದೆ. ನಗರದಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಕಟ್ಟಡಗಳಿಗೆ ಪ್ಲಾನ್, ಒಸಿ ನೀಡಲು ಭಾರಿ ಪ್ರಮಾಣದಲ್ಲಿ ಲಂಚ ಪಡೆದಿರುವ ಆರೋಪ ಮಂಜೇಶ್ ಮೇಲಿದೆ. ಪ್ಲಾನ್ ಉಲ್ಲಂಘಿಸಿದ ಕಟ್ಟಡಗಳಿಗೂ ಒಸಿ ನೀಡುತ್ತಿದ್ದ ಎನ್ನಲಾಗಿದೆ.
Bescom Chief General Manager M.L. N. Nagaraj, Superintending Engineer, Public Works Department Building Circle; Five officials, including Satish Babu, and Chennahalli gram panchayat member H.S. The Lokayukta police raided Suresh's houses on Tuesday morning and are conducting searches.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm