ಬ್ರೇಕಿಂಗ್ ನ್ಯೂಸ್
10-01-24 04:01 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸಬೇಕೆಂಬ ವಿಚಾರದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ನಾಯಕರು ತಮ್ಮ ಪಟ್ಟು ಸಡಿಲಿಸಿದಂತೆ ಕಾಣುತ್ತಿಲ್ಲ. ದೆಹಲಿ ಹಾಗೂ ರಾಜ್ಯ ಮಟ್ಟದಲ್ಲಿ ಈ ವಿಷಯದಲ್ಲಿ ಸಾಕಷ್ಟು ಒತ್ತಡ ಹೇರುತ್ತಿರುವ ಸಚಿವ ಜಾರಕಿಹೊಳಿ ಅವರು ಲೋಕಸಭಾ ಚುನಾವಣೆ ದೃಷ್ಟಿಯಿಂದ ಲಿಂಗಾಯತರು, ಪ.ಜಾತಿ ಹಾಗೂ ಪಂಗಡದವರಿಗೆ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕೆಂದು ಪ್ರತಿಪಾದಿಸುತ್ತ ಬಂದಿದ್ದಾರೆ.
ಸೋಮವಾರ ರಾತ್ರಿ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಡಿಸಿಎಂ ಹುದ್ದೆ ಸೃಷ್ಟಿ ಮತ್ತು ಜಾತಿ ಪ್ರಾತಿನಿಧ್ಯ ನೀಡುವ ಅಗತ್ಯವನ್ನು ಮನದಟ್ಟು ಮಾಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಸತೀಶ್ ಜಾರಕಿಹೊಳಿ, “ನಮ್ಮ ವಿಚಾರಗಳನ್ನು ಪ್ರಧಾನ ಕಾರ್ಯದರ್ಶಿಗಳಿಗೆ ಹೇಳಿದ್ದೇವೆ. ಬುಧವಾರ ಬೆಂಗಳೂರಿನಲ್ಲಿ ಸಭೆ ಇದೆ. ಜ.11ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಸುರ್ಜೇವಾಲ ಭೇಟಿ ವೇಳೆಯೂ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪಿಸಿದ್ದೇವೆ. ಪ್ರಬಲ ಜಾತಿಗಳಿಗೆ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದಿದ್ದಾರೆ.
ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಲವು ಹಿರಿಯ ಸಚಿವರಿಗೆ ಫೋನ್ ಮಾಡಿ ಎಚ್ಚರಿಕೆ ನೀಡಿದ್ದಾರೆ. ಸಚಿವರಾದ ಡಾ.ಪರಮೇಶ್ವರ್, ದಿನೇಶ್ ಗುಂಡೂರಾವ್, ಕೆ.ಎಚ್.ಮುನಿಯಪ್ಪ, ಕೆ.ಎನ್. ರಾಜಣ್ಣ ಅವರಿಗೆ ದೂರವಾಣಿ ಕರಡ ಮಾಡಿ, ಡಿಸಿಎಂ ವಿಚಾರವನ್ನು ಪದೇ ಪದೆ ಪ್ರಸ್ತಾಪಿಸಬೇಡಿ ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ.
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಈ ರೀತಿಯ ಗೊಂದಲ ಎಬ್ಬಿಸಬಾರದು. ಆಗಾಗ್ಗೆ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪ ಮಾಡುವ ಮೂಲಕ ಗೊಂದಲ ಸೃಷ್ಟಿಸುವುದು ಸರಿ ಅಲ್ಲ. ಸರ್ಕಾರ ಐದೂ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಅವುಗಳನ್ನು ಮುಂದಿಟ್ಟು ಜನರ ಮನ ಗೆಲ್ಲಬೇಕು ಎಂದು ವೇಣುಗೋಪಾಲ್ ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
Some leaders, including PwD Minister Satish Jarkiholi, do not seem to have relented on the issue of creating three deputy chief ministers' posts in the state government ahead of the Lok Sabha elections. Jarkiholi, who has been putting a lot of pressure on the issue at the Delhi and state levels, has been advocating the creation of three deputy CM posts for Lingayats, SCs and STs in view of the Lok Sabha elections.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm