ಬ್ರೇಕಿಂಗ್ ನ್ಯೂಸ್
10-01-24 04:41 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದರೆ, ಇತ್ತ ಕರ್ನಾಟಕದ ಮುಜರಾಯಿ ಇಲಾಖೆ ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ವಸತಿ ವ್ಯವಸ್ಥೆ ಮಾಡಲು ಮುಂದಾಗಿದೆ. ಇನ್ನೇನು ಕೆಲ ದಿನಗಳಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ. ಇದಕ್ಕೂ ಮೊದಲೇ ಉತ್ತರಪ್ರದೇಶ ಸರ್ಕಾರಕ್ಕೆ ಕರ್ನಾಟಕದಿಂದ ಪತ್ರ ಬರೆದಿದ್ದು ವಸತಿ ನಿವಾಸಕ್ಕೆ ಮನವಿ ಮಾಡಿದೆ.
ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಮಭಕ್ತರು ಅಯ್ಯೋಧ್ಯೆಗೆ ಬರುತ್ತಾರೆ. ಅವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ರಾಜ್ಯ ಮುಜರಾಯಿ ಇಲಾಖೆಯಿಂದ ಪತ್ರದ ಮೂಲಕ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದೆ.
ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ 2023ರ ಆಗಸ್ಟ್ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಅದಕ್ಕೂ ಹಿಂದೆ, 2020ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಗೆ ಆಗಿನ ಸಿಎಂ ಯಡಿಯೂರಪ್ಪ ಕೂಡ ಪತ್ರ ಬರೆದು ಮನವಿ ಮಾಡಿದ್ದರು. ರಾಜ್ಯದ ಮನವಿಗೆ ಉತ್ತರ ಪ್ರದೇಶ ಸರ್ಕಾರದ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ಪತ್ರ ಕಳುಹಿಸಿತ್ತು.
ಅಯೋಧ್ಯೆಯಲ್ಲಿ ಕರ್ನಾಟಕ ಸರ್ಕಾರದ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿಯನ್ನ ರಾಜ್ಯದ ಮುಜರಾಯಿ ಇಲಾಖೆ ಮಾಡುತ್ತಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ್ಯ ಹೂಡಲು ತೊಂದರೆ ಆಗದಂತೆ ಕ್ರಮಕ್ಕೆ ಮುಂದಾಗಿದೆ. ಎರಡು ದಿನಗಳ ಹಿಂದೆ ರಾಜ್ಯದ ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳುವ ಜ 22ರಂದು ವಿಶೇಷ ಪೂಜೆ ನಡೆಸಲು ಸುತ್ತೋಲೆ ಕಳುಹಿಸಿತ್ತು. ಬಿಜೆಪಿ ಮತ್ತು ಸಂಘ ಪರಿವಾರ ರಾಮ ಮಂದಿರದ ವಿಚಾರದಲ್ಲಿ ಪ್ರಚಾರ ಪಡೆಯುತ್ತಿರುವಾಗಲೇ ಕಾಂಗ್ರೆಸ್ ಸರ್ಕಾರವೂ ಪೂರಕವಾಗಿ ಕ್ರಮಕ್ಕೆ ಮುಂದಾಗಿದೆ.
The whole nation is waiting for Ram Mandir (Ayodhya Ram Mandir) in Ramnoor. Those moments are just a few days away. On this occasion, the Karnataka Religious Endowment Department has come forward to give a good news to the people.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 04:02 pm
HK News Staffer
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm
ಶಿವಮೊಗ್ಗ- ಮಂಗಳೂರಿನಲ್ಲಿ ಐಸಿಸ್ ನೆಟ್ವರ್ಕ್ ; ಹಣಕಾ...
21-04-26 10:02 pm
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm