ಬ್ರೇಕಿಂಗ್ ನ್ಯೂಸ್
10-01-24 10:28 pm HK News Desk ಕರ್ನಾಟಕ
Photo credits : Suvarna News
ಹಾವೇರಿ, ಜ.10: ಮುಸ್ಲಿಂ ವಿವಾಹಿತ ಮಹಿಳೆಯೊಂದಿಗೆ ಪರ ಪುರುಷನೊಬ್ಬ ಲಾಡ್ಜ್ ನಲ್ಲಿದ್ದಾಗ ಸಿಕ್ಕಿಬಿದ್ದಿದ್ದು, ಇದರಿಂದ ರೊಚ್ಚಿಗೆದ್ದ ಯುವತಿ ಕಡೆಯ ಯುವಕರು ಇಬ್ಬರ ಮೇಲೂ ಲಾಡ್ಜ್ ಗೆ ನುಗ್ಗಿ ಹಲ್ಲೆಗೈದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದಿದೆ.
ಬುರ್ಖಾ ಧರಿಸಿಕೊಂಡು ಬಂದಿದ್ದ ಮಹಿಳೆಯನ್ನೂ ಥಳಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ಸೋಮವಾರ ಮಧ್ಯಾಹ್ನ ಘಟನೆ ನಡೆದಿದ್ದು ನೈತಿಕ ಗೂಂಡಾಗಿರಿಯ ವಿಡಿಯೋ ಹೊರಬಂದಿದ್ದರಿಂದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾನಗಲ್ ಪಟ್ಟಣದ ನಾಲ್ಕರ ಕ್ರಾಸ್ ಬಳಿ ಇರುವ ಖಾಸಗಿ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಬುರ್ಖಾ ಹಾಕಿ ಅನ್ಯಕೋಮಿನ ಪುರುಷನ ಜತೆ ಲಾಡ್ಜ್ನಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಗಮನಿಸಿದ್ದ ಆಟೋ ಚಾಲಕ, ಮುಸ್ಲಿಂ ಯುವಕರಿಗೆ ಮಾಹಿತಿ ನೀಡಿದ್ದ. ಬಳಿಕ ಅರ್ಧ ಗಂಟೆಯಲ್ಲೇ ಜಮಾಯಿಸಿದ ಅಕ್ಕಿ ಆಲೂರಿನ ನಾಲ್ಕೈದು ಮುಸ್ಲಿಂ ಯುವಕರ ತಂಡ ಲಾಡ್ಜ್ನ ಕೊಠಡಿಗೆ ತೆರಳಿದ್ದು ರೂಮ್ನಲ್ಲಿ ನೀರಿನ ಸಮಸ್ಯೆ ಇದೆಯೆಂದು ಹೇಳಿ ಬಾಗಿಲು ತೆಗೆಸಿದ್ದಾರೆ. ಒಳಗಿದ್ದವರು ನೀರು ಬರುತ್ತಿದೆ ಎಂದರೂ ಪದೇ ಪದೇ ಬಾಗಿಲು ತಟ್ಟಿದ್ದು ಬಾಗಿಲು ತೆಗೆದ ತಕ್ಷಣ ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ. ಮಹಿಳೆಯನ್ನು ಎಳದಾಡಿ ಬಟ್ಟೆ ಹರಿದು ಹೊಡೆದಿರುವ ವಿಡಿಯೋ ವೈರಲ್ ಆಗಿದೆ.
ಮಹಿಳೆಯ ಹೇಳಿಕೆಯನ್ನು ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಗೆ ಹಾನಗಲ್ ತಾಲೂಕ ಆಸ್ಪತ್ರೆಯಲ್ಲಿ ಪೊಲೀಸರು ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಅಕ್ಕಿಆಲೂರಿನ ಅಪ್ತಾಬ ಚಂದನಕಟ್ಟಿ, ಮದರಸಾಬ ಮಹಮ್ಮದ್ ಇಸಾಕ್ ಮಂಡಕ್ಕಿ, ಸಮೀವುಲ್ಲಾ ಲಾಲನವರ ಸೇರಿ ಐವರ ಮೇಲೆ ಪ್ರಕರಣ ದಾಖಲಾಗಿದೆ, ಇದರಲ್ಲಿ ಅಪ್ತಾಬ ಚಂದನಕಟ್ಟಿ, ಮದರಸಾಬ ಮಂಡಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
An incident took place in Hanagal of Haveri district when a pro man was caught with a Muslim married woman in a lodge, and the youths from the young woman's side stormed into the lodge and assaulted both of them.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm