ಬ್ರೇಕಿಂಗ್ ನ್ಯೂಸ್
10-01-24 10:28 pm HK News Desk ಕರ್ನಾಟಕ
Photo credits : Suvarna News
ಹಾವೇರಿ, ಜ.10: ಮುಸ್ಲಿಂ ವಿವಾಹಿತ ಮಹಿಳೆಯೊಂದಿಗೆ ಪರ ಪುರುಷನೊಬ್ಬ ಲಾಡ್ಜ್ ನಲ್ಲಿದ್ದಾಗ ಸಿಕ್ಕಿಬಿದ್ದಿದ್ದು, ಇದರಿಂದ ರೊಚ್ಚಿಗೆದ್ದ ಯುವತಿ ಕಡೆಯ ಯುವಕರು ಇಬ್ಬರ ಮೇಲೂ ಲಾಡ್ಜ್ ಗೆ ನುಗ್ಗಿ ಹಲ್ಲೆಗೈದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದಿದೆ.
ಬುರ್ಖಾ ಧರಿಸಿಕೊಂಡು ಬಂದಿದ್ದ ಮಹಿಳೆಯನ್ನೂ ಥಳಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ಸೋಮವಾರ ಮಧ್ಯಾಹ್ನ ಘಟನೆ ನಡೆದಿದ್ದು ನೈತಿಕ ಗೂಂಡಾಗಿರಿಯ ವಿಡಿಯೋ ಹೊರಬಂದಿದ್ದರಿಂದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾನಗಲ್ ಪಟ್ಟಣದ ನಾಲ್ಕರ ಕ್ರಾಸ್ ಬಳಿ ಇರುವ ಖಾಸಗಿ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಬುರ್ಖಾ ಹಾಕಿ ಅನ್ಯಕೋಮಿನ ಪುರುಷನ ಜತೆ ಲಾಡ್ಜ್ನಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಗಮನಿಸಿದ್ದ ಆಟೋ ಚಾಲಕ, ಮುಸ್ಲಿಂ ಯುವಕರಿಗೆ ಮಾಹಿತಿ ನೀಡಿದ್ದ. ಬಳಿಕ ಅರ್ಧ ಗಂಟೆಯಲ್ಲೇ ಜಮಾಯಿಸಿದ ಅಕ್ಕಿ ಆಲೂರಿನ ನಾಲ್ಕೈದು ಮುಸ್ಲಿಂ ಯುವಕರ ತಂಡ ಲಾಡ್ಜ್ನ ಕೊಠಡಿಗೆ ತೆರಳಿದ್ದು ರೂಮ್ನಲ್ಲಿ ನೀರಿನ ಸಮಸ್ಯೆ ಇದೆಯೆಂದು ಹೇಳಿ ಬಾಗಿಲು ತೆಗೆಸಿದ್ದಾರೆ. ಒಳಗಿದ್ದವರು ನೀರು ಬರುತ್ತಿದೆ ಎಂದರೂ ಪದೇ ಪದೇ ಬಾಗಿಲು ತಟ್ಟಿದ್ದು ಬಾಗಿಲು ತೆಗೆದ ತಕ್ಷಣ ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ. ಮಹಿಳೆಯನ್ನು ಎಳದಾಡಿ ಬಟ್ಟೆ ಹರಿದು ಹೊಡೆದಿರುವ ವಿಡಿಯೋ ವೈರಲ್ ಆಗಿದೆ.
ಮಹಿಳೆಯ ಹೇಳಿಕೆಯನ್ನು ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಗೆ ಹಾನಗಲ್ ತಾಲೂಕ ಆಸ್ಪತ್ರೆಯಲ್ಲಿ ಪೊಲೀಸರು ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಅಕ್ಕಿಆಲೂರಿನ ಅಪ್ತಾಬ ಚಂದನಕಟ್ಟಿ, ಮದರಸಾಬ ಮಹಮ್ಮದ್ ಇಸಾಕ್ ಮಂಡಕ್ಕಿ, ಸಮೀವುಲ್ಲಾ ಲಾಲನವರ ಸೇರಿ ಐವರ ಮೇಲೆ ಪ್ರಕರಣ ದಾಖಲಾಗಿದೆ, ಇದರಲ್ಲಿ ಅಪ್ತಾಬ ಚಂದನಕಟ್ಟಿ, ಮದರಸಾಬ ಮಂಡಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
An incident took place in Hanagal of Haveri district when a pro man was caught with a Muslim married woman in a lodge, and the youths from the young woman's side stormed into the lodge and assaulted both of them.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm