ಬ್ರೇಕಿಂಗ್ ನ್ಯೂಸ್
13-01-24 07:02 pm HK News Desk ಕರ್ನಾಟಕ
ಕಾರವಾರ, ಜ.13: ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಅದರ ಸಾಲಿಗೆ ಸೇರಲಿದೆ. ಇದನ್ನು ಬೇಕಾದರೆ ಬೆದರಿಕೆ ಅಂತ ತಿಳಿಯಿರಿ. ಬಾಬ್ರಿ ಮಸೀದಿ ನಿರ್ನಾಮದಂತೆ ಮಾಡುವುದು ಗ್ಯಾರಂಟಿಯೇ. ಇದು ಹಿಂದೂ ಸಮಾಜದ ತೀರ್ಮಾನ ಎಂದು ಸಂಸದ ಅನಂತ ಕುಮಾರ್ ಹೆಗಡೆ ವೀರಾವೇಶದ ಮಾತುಗಳನ್ನಾಡಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ನಿದ್ದೆಯಿಂದ ಎದ್ದು ಕುಳಿತಂತೆ ವರ್ತಿಸುತ್ತಿರುವ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡತೊಡಗಿದ್ದಾರೆ. ಕುಮಟಾದಲ್ಲಿ ರಾಮಮಂದಿರ ಆಮಂತ್ರಣ ಕುರಿತ ಕಾರ್ಯಕ್ರಮದಲ್ಲಿ ಅನಂತ ಹೆಗಡೆ ಭಾಷಣ ಮಾಡಿದ್ದು ಶಿರಸಿಯ ಸಿಪಿ ಬಜಾರ್ದಲ್ಲಿರುವ ಮಸೀದಿ ಇರುವುದು ಅದು ವಿಜಯ ವಿಠ್ಠಲ ದೇವಸ್ಥಾನ. ಶ್ರೀರಂಗ ಪಟ್ಟಣದಲ್ಲಿರುವ ದೊಡ್ಡ ಮಸೀದಿ ಅದು ಮಾರುತಿ ದೇವಸ್ಥಾನ. ದೇಶದ ಹಳ್ಳಿಯ ಮೂಲೆ ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ. ಅದನ್ನು ಕಿತ್ತುಹಾಕೋ ತನಕ ಈ ಹಿಂದು ಸಮಾಜ ಮತ್ತೆ ವಾಪಾಸ್ ಕೂತುಕೊಳ್ಳೋದಿಲ್ಲ. ಈಗ ರಣಭೈರವ ಎದ್ದಾಗಿದೆ, ಮತ್ತೆ ಕೂರುವ ಪ್ರಶ್ನೆಯೇ ಇಲ್ಲ.

ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದೇ ಇದ್ರೆ ಇದು ಹಿಂದೂ ರಕ್ತವೇ ಅಲ್ಲ ಎಂದು ಹೇಳಿದ ಅವರು, ನಮ್ಮ ವಿರೋಧಿ ಕಾಂಗ್ರೆಸ್ ಅಲ್ಲ. ಅಲ್ಲಿರುವ ಕೆಲವರ ಮಾನಸೀಕತೆ ಅಷ್ಟೇ. ಮುರುಕುರಾಮಯ್ಯನಂತಹ ಮಾನಸಿಕತೆಯೇ ನಮ್ಮ ವಿರೋಧಿ. ಗತಿಕೆಟ್ಟ ಹರಾಜಾಗಿ ಹೋದಂತಹ, ಅಲ್ಪಸಂಖ್ಯಾತ ಓಟಿಗಾಗಿ ಓಲೈಸುವ ಮಾನಸಿಕತೆಗೆ ನಮ್ಮ ವಿರೋಧ. ರಾಮಜನ್ಮಭೂಮಿ ಆಮಂತ್ರಣ ಬಂದಿಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆಯನ್ನೇ ಅಣಕಿಸಿ ಮುಖ್ಯಮಂತ್ರಿಯ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ.
As the Babri Masjid is destroyed, bhatkal's golden palli will also join its ranks. Think of this as a threat. Is it a guarantee that the Babri Masjid will be demolished? Mp Anant Kumar Hegde said that this is the decision of the Hindu society.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am