ಬ್ರೇಕಿಂಗ್ ನ್ಯೂಸ್
14-01-24 01:47 pm HK News Desk ಕರ್ನಾಟಕ
ಕಾರವಾರ, ಜ 13: ಪ್ರಚೋದನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪಗಳಡಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153ಎ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕುಮುಟಾದಲ್ಲಿ ಶನಿವಾರ ನಡೆದಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಹೆಗಡೆ, "ಅಂದು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಗೋ ಹತ್ಯೆ ನಿಷೇಧದ ಬಗ್ಗೆ ದೊಡ್ಡ ಆಂದೋಲನ ನಡೆದಿತ್ತು. ಈ ಆಂದೋಲನದಲ್ಲಿ ಗೋಲಿಬಾರ್ ನಡೆದು ಹತ್ತಾರು ಸಂತರು ಸತ್ತರು. ಇಂದಿರಾ ಗಾಂಧಿ ಸಮ್ಮುಖದಲ್ಲಿ ಈ ಹತ್ಯೆ ನಡೆಯಿತು" ಎಂದು ಆರೋಪಿಸಿದ್ದರು.
ಕೆಲವರು ಜಾತಿ, ಭಾಷೆ, ಪ್ರಾದೇಶಿಕತೆ ಹಾಗು ಇತರ ಹೆಸರಿನಲ್ಲಿ ಸಮಾಜ ಒಡೆಯುತ್ತಿದ್ದಾರೆ. ಈಗಲೂ ಅದೇ ಕೆಲಸ ನಡೆಯುತ್ತಿದೆ. ಆದರೂ ಕೂಡ ಸಮಾಜ ಒಟ್ಟಿಗೆ ನಿಂತಿದೆ. ಹೀಗಾಗಿ ಈಗಿನ ಗೆಲುವನ್ನು ಮುಂದಿನ ಶತಮಾನದಲ್ಲೂ ನೆನೆಯುವಂತಿರಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿರುವಂತೆ ಈ ಬಾರಿಯ ಗೆಲುವು ಮುಂದಿನ ದಿನಗಳಲ್ಲಿ ಅಳಿಸಲು ನಮ್ಮಿಂದಲೂ ಆಗಬಾರದು. ಗೆಲುವಿನ ಹೊಡೆತ ನಮ್ಮ ವಿರೋಧಿಗಳಿಗೆ ಆಗಬೇಕು. ನಮ್ಮ ವಿರೋಧ ಕಾಂಗ್ರೆಸ್ ಅಲ್ಲ. ಆದರೆ, ನಮ್ಮ ವಿರೋಧಿ ಸಿದ್ದರಾಮಯ್ಯ" ಎಂದು ವಾಗ್ದಾಳಿ ನಡೆಸಿದ್ದರು.
ಸಿಎಂ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ನಲ್ಲಿ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, "ರಾಜಕೀಯ ಉದ್ದೇಶದಿಂದ ಉತ್ತರ ಕನ್ನಡ ಸಂಸದರಾದ ಅನಂತ ಕುಮಾರ್ ಹೆಗಡೆಯವರು ಬಳಸಿದ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕೇಂದ್ರದ ಮಂತ್ರಿಯಾಗಿದ್ದಾಗ, ಸಂವಿಧಾನವನ್ನೇ ಬದಲಾಯಿಸುತ್ತೇನೆ ಎಂದು ಹೇಳಿದ್ದರು. ಹೀಗಾಗಿ ಅವರಿಂದ ಉತ್ತಮ ಸಂಸ್ಕೃತಿಯನ್ನು ಅಪೇಕ್ಷಿಸಲು ಸಾಧ್ಯವೇ'' ಎಂದು ಬರೆದಿದ್ದಾರೆ
A suo motu case has been registered against BJP MP Anant Kumar Hegde at Kumta police station on charges of making inflammatory remarks and making hate speeches. An FIR has been registered under IPC sections 505 and 153A.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am