ಬ್ರೇಕಿಂಗ್ ನ್ಯೂಸ್
15-01-24 09:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.15: ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿದ ಬಾಲರಾಮನ ಮೂರ್ತಿಯೇ ಅಯೋಧ್ಯೆ ರಾಮ ಜನ್ಮಭೂಮಿಯ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠೆಗೊಳ್ಳಲು ಫೈನಲ್ ಆಗಿದೆ.
ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠೆ ಮಾಡುವುದಕ್ಕಾಗಿ ಮೂರು ಅಪೂರ್ವ ಮೂರ್ತಿಗಳನ್ನು ಕೆತ್ತಲಾಗಿತ್ತು. ಅದರಲ್ಲಿ ಯಾವ ಮೂರ್ತಿ ಗರ್ಭಗುಡಿ ಸೇರಲಿದೆ ಎಂಬ ಕುತೂಹಲ ಇತ್ತು. ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಮೂರು ಮೂರ್ತಿಗಳಲ್ಲಿ ಯಾವುದು ಬೆಟರ್ ಅನ್ನುವ ಬಗ್ಗೆ ಡಿ.29 ರಂದು ಮತದಾನ ಪ್ರಕ್ರಿಯೆ ನಡೆದಿತ್ತು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿನ 11 ಸದಸ್ಯರು ಮೂರ್ತಿ ಆಯ್ಕೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಂದು ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಿದರೆ ಇನ್ನುಳಿದ ಎರಡು ಮೂರ್ತಿಯನ್ನು ರಾಮ ದೇಗುಲದ ಒಳಗಡೆಯಲ್ಲೇ ಇಡುವುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
ಶಿಲ್ಪಿಗಳಾದ ಕರ್ನಾಟಕದ ಮೈಸೂರು ಮೂಲದ ಅರುಣ್ ಯೋಗಿರಾಜ್, ಗಣೇಶ್ ಭಟ್ ಮತ್ತು ಜೈಪುರದ ಸತ್ಯನಾರಾಯಣ ಪಾಂಡೆ ಪ್ರತ್ಯೇಕ ಮೂರು ಮೂರ್ತಿಗಳನ್ನು ಕೆತ್ತನೆ ಮಾಡಿದ್ದಾರೆ. ಕನ್ನಡಿಗರಾದ ಅರುಣ್ ಯೋಗಿರಾಜ್ ಮತ್ತು ಗಣೇಶ ಭಟ್ ಮೈಸೂರಿನ ಕೃಷ್ಣಶಿಲೆಯನ್ನು ಬಳಕೆ ಮಾಡಿ ಮೂರ್ತಿ ಕೆತ್ತನೆ ಮಾಡಿದ್ದರು. ಸತ್ಯನಾರಾಯಣ ಪಾಂಡೆ ಅವರು ರಾಜಸ್ಥಾನದಿಂದ ತರಿಸಿದ್ದ ಕಲ್ಲನ್ನು ಬಳಕೆ ಮಾಡಿದ್ದರು. ರಾಮಲಲ್ಲಾ ಮೂರ್ತಿಯ ದೀರ್ಘಾವಧಿ ಬಾಳಿಕೆ ಕುರಿತು ತಾಂತ್ರಿಕ ವರದಿಯನ್ನೂ ಪಡೆಯಲಾಗಿದೆ. ಅಂತಿಮವಾಗಿ ಅರುಣ್ ಯೋಗಿರಾಜ್ ತಯಾರಿಸಿದ ಮೂರ್ತಿಯನ್ನೇ ಆಯ್ಕೆ ಮಾಡಲಾಗಿದೆ.
the shyam rang (dark coloured) Ram Lalla idol sculpted on ‘Krishna Shila’ (black stone) by Mysuru-based sculptor Arun Yogiraj has been selected for installation in the garbha griha (sanctum sanctorum) of the new Ram Temple in Ayodhya.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm