ಬ್ರೇಕಿಂಗ್ ನ್ಯೂಸ್
15-01-24 09:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.15: ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿದ ಬಾಲರಾಮನ ಮೂರ್ತಿಯೇ ಅಯೋಧ್ಯೆ ರಾಮ ಜನ್ಮಭೂಮಿಯ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠೆಗೊಳ್ಳಲು ಫೈನಲ್ ಆಗಿದೆ.
ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠೆ ಮಾಡುವುದಕ್ಕಾಗಿ ಮೂರು ಅಪೂರ್ವ ಮೂರ್ತಿಗಳನ್ನು ಕೆತ್ತಲಾಗಿತ್ತು. ಅದರಲ್ಲಿ ಯಾವ ಮೂರ್ತಿ ಗರ್ಭಗುಡಿ ಸೇರಲಿದೆ ಎಂಬ ಕುತೂಹಲ ಇತ್ತು. ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಮೂರು ಮೂರ್ತಿಗಳಲ್ಲಿ ಯಾವುದು ಬೆಟರ್ ಅನ್ನುವ ಬಗ್ಗೆ ಡಿ.29 ರಂದು ಮತದಾನ ಪ್ರಕ್ರಿಯೆ ನಡೆದಿತ್ತು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿನ 11 ಸದಸ್ಯರು ಮೂರ್ತಿ ಆಯ್ಕೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಂದು ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಿದರೆ ಇನ್ನುಳಿದ ಎರಡು ಮೂರ್ತಿಯನ್ನು ರಾಮ ದೇಗುಲದ ಒಳಗಡೆಯಲ್ಲೇ ಇಡುವುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
ಶಿಲ್ಪಿಗಳಾದ ಕರ್ನಾಟಕದ ಮೈಸೂರು ಮೂಲದ ಅರುಣ್ ಯೋಗಿರಾಜ್, ಗಣೇಶ್ ಭಟ್ ಮತ್ತು ಜೈಪುರದ ಸತ್ಯನಾರಾಯಣ ಪಾಂಡೆ ಪ್ರತ್ಯೇಕ ಮೂರು ಮೂರ್ತಿಗಳನ್ನು ಕೆತ್ತನೆ ಮಾಡಿದ್ದಾರೆ. ಕನ್ನಡಿಗರಾದ ಅರುಣ್ ಯೋಗಿರಾಜ್ ಮತ್ತು ಗಣೇಶ ಭಟ್ ಮೈಸೂರಿನ ಕೃಷ್ಣಶಿಲೆಯನ್ನು ಬಳಕೆ ಮಾಡಿ ಮೂರ್ತಿ ಕೆತ್ತನೆ ಮಾಡಿದ್ದರು. ಸತ್ಯನಾರಾಯಣ ಪಾಂಡೆ ಅವರು ರಾಜಸ್ಥಾನದಿಂದ ತರಿಸಿದ್ದ ಕಲ್ಲನ್ನು ಬಳಕೆ ಮಾಡಿದ್ದರು. ರಾಮಲಲ್ಲಾ ಮೂರ್ತಿಯ ದೀರ್ಘಾವಧಿ ಬಾಳಿಕೆ ಕುರಿತು ತಾಂತ್ರಿಕ ವರದಿಯನ್ನೂ ಪಡೆಯಲಾಗಿದೆ. ಅಂತಿಮವಾಗಿ ಅರುಣ್ ಯೋಗಿರಾಜ್ ತಯಾರಿಸಿದ ಮೂರ್ತಿಯನ್ನೇ ಆಯ್ಕೆ ಮಾಡಲಾಗಿದೆ.
the shyam rang (dark coloured) Ram Lalla idol sculpted on ‘Krishna Shila’ (black stone) by Mysuru-based sculptor Arun Yogiraj has been selected for installation in the garbha griha (sanctum sanctorum) of the new Ram Temple in Ayodhya.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 02:15 pm
HK News Staffer
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm
ಶಿವಮೊಗ್ಗ- ಮಂಗಳೂರಿನಲ್ಲಿ ಐಸಿಸ್ ನೆಟ್ವರ್ಕ್ ; ಹಣಕಾ...
21-04-26 10:02 pm
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm