ಬ್ರೇಕಿಂಗ್ ನ್ಯೂಸ್
21-11-20 02:40 pm Bangalore Correspondent ಕರ್ನಾಟಕ
ಬೆಂಗಳೂರು, ನ.21: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೆ ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಪುತ್ರಿಯ ನಿಶ್ಚಿತಾರ್ಥದ ದಿನವೇ ಅಂದರೆ ನವೆಂಬರ್ 19 ರಂದು ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಸಮನ್ಸ್ ಕೊಟ್ಟಿದ್ದಾರೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಖಚಿತಪಡಿಸಿದ್ದು, ಅವರಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ನಾಡಿದ್ದು ನವೆಂಬರ್ 23 ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸಿಬಿಐ ಅಧಿಕಾರಿಗಳು ಸೂಚಿಸಿದ್ದಾರೆ.
ಸಿಬಿಐನಿಂದ ಸಮನ್ಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು, ನವೆಂಬರ್ 19 ರಂದು ನನಗೆ ಸಮನ್ಸ್ ಬಂದಿರುವುದು ನಿಜ. ಬೆಂಗಳೂರಿನ ಸಿಬಿಐ ಕಚೇರಿಯಿಂದ ನೊಟೀಸ್ ಬಂದಿದೆ. ನವೆಂಬರ್ 23 ರಂದು ವಿಚಾರಣೆಗೆ ಬರಲು ಆಗುವುದಿಲ್ಲ ಎಂದು ಮನವಿ ಮಾಡಿದ್ದೇನೆ. ಹೀಗಾಗಿ ನವೆಂಬರ್ 25 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸದಾಶಿವನಗರದ ನಿವಾಸದಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿ ವಿಚಾರಣೆ ನಡೆಸುವುದಕ್ಕಾಗಿ ಸಿಬಿಐ ಸಮನ್ಸ್ ನೀಡಿದೆ.
The Central Bureau of Investigation (CBI) has issued summons to Karnataka Pradesh Congress Committee President DK Shivakumar to appear before the investigators for questioning on November 23.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm