ಬ್ರೇಕಿಂಗ್ ನ್ಯೂಸ್
19-01-24 02:45 pm HK News Desk ಕರ್ನಾಟಕ
ಮಂಡ್ಯ, ಜ.19: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೋರ್ಟಿನಲ್ಲಿ ವಾದಿಸಿ ಜಾಮೀನು ಕೊಡಿಸಿದ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷನನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಪ್ರಭಾಕರ ಭಟ್ ಅವರಿಗೆ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಭಟ್ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ವ್ಯಕ್ತಿ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರು ಎಂಬ ವಿಚಾರ ತಿಳಿಯುತ್ತಿದ್ದಂತೆ ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಅವರನ್ನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ.
ಪ್ರಕರಣ ಸಂಬಂಧ ಕಲ್ಲಡ್ಕ ಪ್ರಭಾಕರ್ ಭಟ್ ಪರ ಡಿ. ಚಂದ್ರೇಗೌಡ ಅವರು ಕೋರ್ಟಿನಲ್ಲಿ ವಕಾಲತ್ತು ವಹಿಸಿದ್ದರು. ಅಲ್ಲದೆ, ಜನವರಿ 17 ರಂದು ಪ್ರಭಾಕರ್ ಭಟ್ಗೆ ಜಾಮೀನು ಮಂಜೂರು ಆಗಿತ್ತು. ಇದೇ ವೇಳೆ, ಕಲ್ಲಡ್ಕ ಪ್ರಭಾಕರ್ ಅವರಿಗೆ ಜಾಮೀನು ಕೊಡಿಸಿದ್ದು ಕಾಂಗ್ರೆಸ್ ಮುಖಂಡ ಎನ್ನುವುದು ಚರ್ಚೆಗೆ ಗ್ರಾಸವಾಗಿತ್ತು. ಜಿಲ್ಲಾ ಕಾಂಗ್ರೆಸ್ ಮುಖಂಡರು ಆಕ್ರೋಶಗೊಂಡು ಕಾಂಗ್ರೆಸ್ ಕಾನೂನು ಘಟಕದ ನಿಯಮದ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಅವರನ್ನು ಪಕ್ಷದಿಂದಲೇ ಕಿತ್ತು ಹಾಕಿದ್ದಾರೆ. ಈ ಬಗ್ಗೆ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಎಎಸ್ ಗೌರಿಶಂಕರ್ ಅವರು ಚಂದ್ರೇಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್ 24 ರಂದು ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ್ದ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ” ಎಂದು ಹೇಳಿಕೆ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್ಐಆರ್ ದಾಖಲಾಗಿತ್ತು.
Mandya congess lawyer suspended for fighting case for RSS leader Kalladka Prabhakar Bhat. RSS leader Kalladka Prabhakar Bhat was granted anticipatory bail on Wednesday by the Third Additional District and Sessions Court, Srirangapatna, in the district, in the case related to his derogatory comments on Muslim women during a speech in Srirangapatna in late December.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm