ಬ್ರೇಕಿಂಗ್ ನ್ಯೂಸ್
22-01-24 05:55 pm HK News Desk ಕರ್ನಾಟಕ
ಶಿವಮೊಗ್ಗ, ಜ 22: ರಾಮಜನ್ಮಭೂಮಿ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನಾ ಕಾರ್ಯವು ಅದ್ಧೂರಿಯಾಗಿ ನೆರವೇರಿದೆ.
ಈ ಖುಷಿಯ ಸಂದರ್ಭದಲ್ಲಿ ಶಿವಮೊಗ್ಗ ನಗರದ ಶಿವಪ್ಪನಾಯಕ ಸರ್ಕಲ್ನಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ಮುಸ್ಲಿಂ ಮಹಿಳೆ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಮಹಿಳೆ ಅಲ್ಲಾ ಹು ಅಕ್ಬರ್ ಎಂದು ಕೂಗಿರುವ ಘಟನೆ ನಡೆದಿದೆ.
ನಗರದ ಶಿವಪ್ಪನಾಯಕ ಸರ್ಕಲ್ನಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಸಿಹಿ ಹಂಚುತ್ತಿದ್ದರು. ಈ ವೇಳೆ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ವೇಳೆ ಮುಂದು ಹೋಗುವಂತೆ ಶ್ರೀರಾಮನ ಭಕ್ತರು ಎಲ್ಲರಿಗೂ ಹೇಳುತ್ತಾ ಬಂದಿದ್ದಾರೆ. ಆಗ ಅಲ್ಲಿದ್ದ ಮುಸ್ಲಿಂ ಮಹಿಳೆಯೊಬ್ಬರು ಆಕ್ರೋಶಗೊಂಡಿದ್ದು, ನನ್ನನ್ನೇಕೆ ತಡೆಯುತ್ತೀರಿ? ಹೇ.. ನಿಮ್ಮ ಪ್ರಧಾನಿ ನರೇಂದ್ರ ಮೋದಿ ಏನು ಮಾಡಿದ್ದಾನೆ? ಎಂದು ಆಕ್ರೋಶವನ್ನು ವ್ಯಕ್ತಪಡಿಸಿದಳು. ಇದು ಆಕ್ರೋಶಕ್ಕೆ ಕಾರಣವಾಯಿತು.
ಅಲ್ಲದೆ, ಇದೇ ವೇಳೆ ಆ ಮಹಿಳೆ ಅಲ್ಲಾ ಹು ಅಕ್ಬರ್ ಎಂದು ಕೂಗಿದ್ದಾಳೆ. ಆಕೆ ಹೀಗೆ ಕೂಗುತ್ತಿದ್ದಂತೆ ರೊಚ್ಚಿಗೆದ್ದ ಶ್ರೀರಾಮ ಸೇನೆ ಕಾರ್ಯಕರ್ತರು, “ಜೈ ಶ್ರೀರಾಮ್” ಎಂದು ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗುತ್ತಿದ್ದಂತೆ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡರು.
ಘೋಷಣೆ ಕೂಗಿದ ಮಹಿಳೆಗೆ ಮಾನಸಿಕ ಸ್ಥಿಮಿತತೆ ಇರಲಿಲ್ಲ, ಕುಟುಂಬದವರ ಹೇಳಿಕೆ ; ಎಸ್ಪಿ
'ಅಲ್ಲಾ ಹು ಅಕ್ಬರ್' ಎಂದು ಘೋಷಣೆ ಕೂಗಿದ ಮಹಿಳೆಗೆ ಮಾನಸಿಕ ಸ್ಥೀಮಿತ ಇಲ್ಲ ಎಂದು ಆಕೆಯ ತಂದೆ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಮಾನಸಿಕ ಸ್ಥೀಮಿತತೆ ಇಲ್ಲದ ಕಾರಣಕ್ಕೆ ಆಕೆ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ ಎಂದು ಆಕೆಯ ಕುಟುಂಬದವರು ತಿಳಿಸಿದ್ದು, ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Tension prevailed for a while near Shivappa Nayaka circle on Monday when a 25-year-old Muslim woman, said to be mentally unstable, raised 'Allahu Akbar' slogans when activists of Hindu organisations were distributing sweets to people to mark the inauguration of Ram Mandir in Ayodhya in Uttar Pradesh.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm