ಬ್ರೇಕಿಂಗ್ ನ್ಯೂಸ್
22-01-24 11:06 pm HK News Desk ಕರ್ನಾಟಕ
ಮೈಸೂರು, ಜ 22: ಸಂಸದ ಪ್ರತಾಪ್ ಸಿಂಹ ಅವರಿಗೆ ದಲಿತ 'ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ.
ರಾಮಲಲ್ಲಾ ವಿಗ್ರಹ ಕೆತ್ತನೆಗೆ ಕಲ್ಲು ತೆಗೆದ ಸ್ಥಳದಲ್ಲಿ ಹಾರೋಹಳ್ಳಿ ಮತ್ತು ಗುಜ್ಜೇಗೌಡನಪುರ ಗ್ರಾಮಸ್ಥರು ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ವಿರೋಧಿ ಘೋಷಣೆ ಕೂಗಿ ಘೇರಾವ್ ಹಾಕಿದ್ದಾರೆ
ಇದರಿಂದ ಸ್ಥಳದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿಯೇ ಇದ್ದ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟ ದಲಿತ ರೈತನಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲ ಎಂಬುದು ಇವರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ
ಮಾಜಿ ತಾಪಂ ಸದಸ್ಯ ಹಾರೋಹಳ್ಳಿ ಸುರೇಶ್ ಮಾತನಾಡಿ, ''ನೀವೊಬ್ಬ ದಲಿತ ವಿರೋಧಿ. ನಿಮ್ಮ ನಡವಳಿಕೆಯಿಂದ ದಲಿತರ ಭಾವನೆಗೆ ಧಕ್ಕೆಯುಂಟಾಗಿದೆ. ಮಹಿಷ ದಸರಾ ಆಚರಣೆ ಸಂದರ್ಭದಲ್ಲಿ ದಲಿತರನ್ನು ತುಳಿದು ಹಾಕಿ ಬಿಡುತ್ತೇನೆ, ಹೊಸಕಿ ಹಾಕಿ ಬಿಡುತ್ತೇನೆ ಎಂದು ಬೆದರಿಸಿದ್ದ ನೀವು ದಲಿತರ ಜಮೀನಿಗೆ ಏಕೆ ಬರುತ್ತೀರಿ? ಇಲ್ಲಿಂದ ಹೊರ ನಡೆಯಿರಿ'' ಎಂದು ಹೇಳಿದರು.
ಈ ವೇಳೆ ಸಂಸದ ಪ್ರತಾಪ್ ಸಿಂಹ, "ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ದಲಿತ ವಿರೋಧಿಯಲ್ಲ" ಎಂದು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದರು. ಆದರೆ ಇದರಿಂದ ಸಮಾಧಾನಗೊಳ್ಳದ ಗ್ರಾಮಸ್ಥರು, "ನೀವು ಏನು ಹೇಳುವುದು ಬೇಡ, ಇಲ್ಲಿಂದ ವಾಪಸ್ ಹೋಗಿ" ಪಟ್ಟು ಹಿಡಿದರು.
ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಸಚಿವ ಸಾ.ರಾ.ಮಹೇಶ್ ಗ್ರಾಮಸ್ಥರ ಮನವೊಲಿಸಲು ಪ್ರಯತ್ನಪಟ್ಟರಾದರೂ ಗ್ರಾಮಸ್ಥರು ಮಾತ್ರ ಅದಕ್ಕೆ ಬಗ್ಗಲಿಲ್ಲ. ನಂತರ ಸಂಸದ ಪ್ರತಾಪ್ ಸಿಂಹ ಅವರನ್ನೇ ಅಲ್ಲಿಂದ ವಾಪಸ್ ಹೋಗುವಂತೆ ಶಾಸಕರು ವಿನಂತಿಸಿದರು.
ಇದರಿಂದ ಬೇಸರಗೊಂಡ ಸಂಸದ ಪ್ರತಾಪ್ ಸಿಂಹ ಅಲ್ಲಿಂದ ಹೊರಟು ಹೋದರು. ಆ ಬಳಿಕ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.
BJP MP Pratap Simha on Monday faced the ire of villagers in Karnataka’s Mysuru district after he was stopped from participating in a foundation laying event of a temple held in a village, ahead of the Ram temple consecration ceremony in Ayodhya.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm