ಬ್ರೇಕಿಂಗ್ ನ್ಯೂಸ್
23-01-24 10:54 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಅಸ್ಸಾಂನ ಗುವಾಹಟಿಯಲ್ಲಿ ತಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿಜೆಪಿಯ ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದಿರುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರದ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿರುವುದಾಗಿ ಆರೋಪಿಸಿದ್ದಾರೆ.
ಬಿಜೆಪಿಯವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ.
ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ, ಶಿವಕುಮಾರ ಹೆಸರಲ್ಲಿ ಶಿವ ಹಾಗೂ ಷಣ್ಮುಗ ಇದ್ದಾರೆ. ಹರಿಪ್ರಸಾದ್ ಅವರ ಹೆಸರಲ್ಲಿ ಹರಿ ಇದ್ದಾನೆ. ಕೃಷ್ಣ ಭೈರೇಗೌಡರ ಹೆಸರಲ್ಲಿ ಕೃಷ್ಣ ಇದ್ದಾನೆ. ಹಿಂದೂ ಧರ್ಮ ನಿಮ್ಮ ಮನೆ ಆಸ್ತಿಯೇ ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ನೂರಾದರೂ ಭಕ್ತಿವೊಂದೇ, ಕರ್ಮ ಹಲವಾದರೂ ನಿಷ್ಠೆವೊಂದೇ, ದೇವನೊಬ್ಬ ನಾಮ ಹಲವು. ನಾವು ಕಲ್ಲು, ನೀರು, ಮರ, ಗಾಳಿಯಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸರ್ಕಾರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಹಜ್ ಸಮಿತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಇದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.
D K Shivakumar slams BJP for stopping Rahul Gandhi Bharat Jodo Nyay Yatra. The Rahul Gandhi-led Bharat Jodo Nyay Yatra was stopped from entering Guwahati city on Tuesday, triggering protests from Congress workers who broke barricades and raised slogans
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm