ಬ್ರೇಕಿಂಗ್ ನ್ಯೂಸ್
25-01-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ತೊರೆದು ಮರಳಿ ಮಾತೃಪಕ್ಷ ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್ಗೆ ಸಂಕಷ್ಟ ಎದುರಾಗಿದೆ. ಜಗದೀಶ್ ಶೆಟ್ಟರ್ ಅವರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗುತ್ತದೆ ಅಂತ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ನನಗೆ 11:45ಕ್ಕೆ ಜಗದೀಶ್ ಶೆಟ್ಟರ್ ಕರೆ ಮಾಡಿ, ಬಿಜೆಪಿಗೆ ಹೋಗ್ತಿದ್ದೀನಿ ರಾಜಿನಾಮೆ ಕೊಡುತ್ತೇನೆ ಎಂದರು. ನಾನು ರಾಜಿನಾಮೆ ಕಳಿಸಿಕೊಡಿ ಅಂತ ಹೇಳಿದ್ದೇನೆ.

ಆದರೆ, ಶೆಟ್ಟರ್ ಅವರು ರಾಜೀನಾಮೆ ಪತ್ರವನ್ನು ಮೇಲ್ ಮಾಡ್ತೀನಿ ಎಂದಿದ್ದರು. ಇನ್ನೂ ನನಗೆ ಮೇಲ್ ಬಂದಿಲ್ಲ. ಮೇಲ್ ಬಂದರೂ ಅದನ್ನು ಗಣನೆ ತೆಗೆದುಕೊಳ್ಳಲು ಆಗೋದಿಲ್ಲ. ಯಾವುದೇ ಸದಸ್ಯ ನೇರವಾಗಿ ಬಂದು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಹೊರಟ್ಟಿ ತಿಳಿಸಿದ್ದಾರೆ.
ರಾಜೀನಾಮೆ ಪಡೆಯುವಾಗ, ಸ್ವ ಇಚ್ಛೆಯಿಂದ ರಾಜೀನಾಮೆ ಕೊಡ್ತಿದ್ದೀರಾ ಅಂತ ಕೇಳ್ತೀವಿ. ಅವರು ಪಕ್ಷ ಬಿಟ್ಟು ಬೇರೆ ಪಕ್ಷ ಹೋಗೋದು ಅವರ ಇಷ್ಟ. ಆದರೆ ಜಗದೀಶ್ ಶೆಟ್ಟರ್ ಅವರು ಈಗಲೂ ಕಾಂಗ್ರೆಸ್ ಸದಸ್ಯರು. ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆದರೂ ಆಗಬಹುದು ಎಂದು ಸಭಾಪತಿ ತಿಳಿಸಿದ್ದಾರೆ.
ಜಗದೀಶ್ ಶೆಟ್ಟರ್ ರಾಜೀನಾಮೆ ವಿಚಾರದಲ್ಲಿ ಯಾರಾದ್ರೂ ದೂರು ಕೊಡಬಹುದು. ಇದುವರೆಗು ಯಾವ ಪಕ್ಷದ ನಾಯಕರು ನನ್ನ ಜೊತೆ ಮಾತನಾಡಿಲ್ಲ. ಕಾನೂನು ಪ್ರಕಾರ ಯಾವುದೇ ಸದಸ್ಯ ರಾಜೀನಾಮೆ ಕೊಟ್ಟ ನಂತರವಷ್ಟೇ ಬೇರೆ ಪಕ್ಷಕ್ಕೆ ಹೋಗಬೇಕು ಎಂದು ಹೊರಟ್ಟಿ ಹೇಳಿದ್ದಾರೆ.
Jagadish Shettar, who quit the Congress ahead of the Lok Sabha elections and returned to his parent party BJP, is in trouble. Council Chairman Basavaraj Horatti said that the anti-defection law will be applicable to Jagadish Shettar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 04:54 pm
HK News Staffer
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm