ಬ್ರೇಕಿಂಗ್ ನ್ಯೂಸ್
02-02-24 11:01 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.2: ಕಲ್ಲು ಹೊಡೆದುಕೊಂಡು ಇದ್ದವರನ್ನ ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಪ್ರತ್ಯೇಕ ರಾಷ್ಟ್ರದ ಬಗ್ಗೆ ಡಿ.ಕೆ.ಸುರೇಶ್ ಹೇಳಿಕೆ ವಿಚಾರ ಕುರಿತು ಬಿಡದಿಯಲ್ಲಿ ಸುದ್ದಿಗಾರೊಂದಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆಯ ದಿನ ಡಿ.ಕೆ.ಸುರೇಶ್ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಎಂಬ ಕಾರಣ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೊ ನ್ಯಾಯ ಯಾತ್ರೆ ಮಾಡಿದರು. ಈಗ ವಿಭಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಒಂದು ವೇಳೆ ವಿಭಜನೆ ಆಯ್ತು ಅಂತ ತಿಳಿದುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ ಎಂದು ಟಾಂಗ್ ಕೊಟ್ಟಿದ್ದಾರೆ.
174 ಕೋಟಿ ರೂ. ದೇಶದ ಮೊದಲನೇ ಬಜೆಟ್. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ನಾವು ಫೈನಾನ್ಸ್ ಕಮಿಷನ್ಗಳನ್ನ ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿ ಕೊಟ್ಟು ಪರಿಶೀಲನೆ ಮಾಡುತ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣ ಬೇಕು ಅನ್ನೋ ವರದಿ ಕೊಡುತ್ತಾರೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ. ಯಾವ ರಾಜ್ಯ ಅಭಿವೃದ್ಧಿ ಆಗಿದೆ ಅದನ್ನ ನೋಡಿ ಹಣ ಹಂಚುತ್ತಾರೆ. ಈ ಹಂಚಿಕೆಯನ್ನು ಕಾಂಗ್ರೆಸ್ ಇದ್ದಾಗಲೇ ಪ್ರಾರಂಭ ಮಾಡಿದ್ದು. ಮೋದಿ ಬಂದು ಇದನ್ನ ಪ್ರಾರಂಭ ಮಾಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಕಲ್ಲು ಹೊಡೆದುಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂಥವರನ್ನ ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದ್ರೆ ಕಟ್ತಾರಾ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಲೇವಡಿ ಮಾಡಿದ್ದಾರೆ.
What will happen if those who pelted stones are sent to the Lok Sabha? Former Chief Minister HD Kumaraswamy has lashed out at DK Suresh, accusing him of looting the poor people here.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm