ಬ್ರೇಕಿಂಗ್ ನ್ಯೂಸ್
02-02-24 11:01 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.2: ಕಲ್ಲು ಹೊಡೆದುಕೊಂಡು ಇದ್ದವರನ್ನ ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಪ್ರತ್ಯೇಕ ರಾಷ್ಟ್ರದ ಬಗ್ಗೆ ಡಿ.ಕೆ.ಸುರೇಶ್ ಹೇಳಿಕೆ ವಿಚಾರ ಕುರಿತು ಬಿಡದಿಯಲ್ಲಿ ಸುದ್ದಿಗಾರೊಂದಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆಯ ದಿನ ಡಿ.ಕೆ.ಸುರೇಶ್ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಎಂಬ ಕಾರಣ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೊ ನ್ಯಾಯ ಯಾತ್ರೆ ಮಾಡಿದರು. ಈಗ ವಿಭಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಒಂದು ವೇಳೆ ವಿಭಜನೆ ಆಯ್ತು ಅಂತ ತಿಳಿದುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ ಎಂದು ಟಾಂಗ್ ಕೊಟ್ಟಿದ್ದಾರೆ.
174 ಕೋಟಿ ರೂ. ದೇಶದ ಮೊದಲನೇ ಬಜೆಟ್. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ನಾವು ಫೈನಾನ್ಸ್ ಕಮಿಷನ್ಗಳನ್ನ ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿ ಕೊಟ್ಟು ಪರಿಶೀಲನೆ ಮಾಡುತ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣ ಬೇಕು ಅನ್ನೋ ವರದಿ ಕೊಡುತ್ತಾರೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ. ಯಾವ ರಾಜ್ಯ ಅಭಿವೃದ್ಧಿ ಆಗಿದೆ ಅದನ್ನ ನೋಡಿ ಹಣ ಹಂಚುತ್ತಾರೆ. ಈ ಹಂಚಿಕೆಯನ್ನು ಕಾಂಗ್ರೆಸ್ ಇದ್ದಾಗಲೇ ಪ್ರಾರಂಭ ಮಾಡಿದ್ದು. ಮೋದಿ ಬಂದು ಇದನ್ನ ಪ್ರಾರಂಭ ಮಾಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಕಲ್ಲು ಹೊಡೆದುಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂಥವರನ್ನ ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದ್ರೆ ಕಟ್ತಾರಾ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಲೇವಡಿ ಮಾಡಿದ್ದಾರೆ.
What will happen if those who pelted stones are sent to the Lok Sabha? Former Chief Minister HD Kumaraswamy has lashed out at DK Suresh, accusing him of looting the poor people here.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm