ಬ್ರೇಕಿಂಗ್ ನ್ಯೂಸ್
03-02-24 10:20 pm HK News Desk ಕರ್ನಾಟಕ
ಹಾಸನ, ಫೆ.3: ಹಾಸನದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ಮುಖಂಡ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ. ನಾನು ಮತ್ತು ಪ್ರೀತಂ ಗೌಡ ಪಿತೂರಿಗೆ ಬಲಿಯಾಗಿದ್ದೇವೆ. ಕೆಲವು ಸಲ ವಿಷಕಂಠ ಆಗ್ಬೇಕಾಗುತ್ತೆ. ಈಗ ಯಾರ ಬಗ್ಗೆಯೂ ದೂರುವುದಿಲ್ಲ ಎಂದು ಹೇಳಿ ಜೆಡಿಎಸ್ ನಾಯಕರ ಬಗ್ಗೆ ಪರೋಕ್ಷ ಅಸಮಾಧಾನ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಾನು ಹಾಗೂ ಹಾಸನದಲ್ಲಿ ಪ್ರೀತಂ ಕೆಲಸ ಮಾಡಿಯೂ ರಾಜಕೀಯ ಪಿತೂರಿಗೆ ಬಲಿಯಾಗಿದ್ದೇವೆ. ನಮ್ಮನ್ನು ಕೆಲಸ ಮಾಡಿಲ್ಲ ಅಂತ ಯಾರೂ ದೂರುವುದಿಲ್ಲ. ರಾಜಕೀಯ ಪಿತೂರಿಗೆ ನಾವು ಬಲಿಯಾದ್ವಿ. ಚಿಕ್ಕಮಗಳೂರಿನಲ್ಲಿ ಜೆಡಿಎಸ್ 2018 ರಲ್ಲಿ 40 ಸಾವಿರ ಓಟು ಪಡೆದಿತ್ತು. ಇತ್ತೀಚಿನ ಚುನಾವಣೆಯಲ್ಲಿ 1700 ಓಟು ಪಡೆದಿದೆ.

ಕಾಂಗ್ರೆಸ್ ಹಾಸನದಲ್ಲಿ ಕಳೆದ ಬಾರಿ 38 ಸಾವಿರ ತಗೊಂಡಿತ್ತು. ಈಗ 4 ಸಾವಿರ ಮತ ಮಾತ್ರ ಗಳಿಸಿದೆ. ಪಿತೂರಿ ಹೇಗೆ ನಡೆದಿದೆ ಅಂತ ಬಿಡಿಸಿ ಹೇಳಬೇಕಿಲ್ಲ. ಸಂಬಂಧ ಕೆಡಬಾರದು ಅಂತ ನಾವು ನೀಲಕಂಠ ಆಗಿದ್ದೇವೆ, ವಿಷಕಂಠ ಆಗಿದ್ದೇವೆ. ಒಳ್ಳೆಯ ಉದ್ದೇಶಕ್ಕಾಗಿ ಸಂಬಂಧ ಕೆಡಬಾರದು ಅಂತ ಇದ್ದೀವಿ.
ಈಗ ಎಲ್ಲವನ್ನು ಬಿಡಿಸಿ ಹೇಳಲು ಆಗುವುದಿಲ್ಲ. ಎಲ್ಲಿ ಏನು, ಹೇಗೆ ಪಿತೂರಿ ನಡೀತು ಅಂತ ಗೊತ್ತು. ಎಲ್ಲವನ್ನು ಹೊಟ್ಟೆಯಲ್ಲಿ ಇಟ್ಗೊಂಡಿದ್ದೀವಿ, ನಾವು ಅಷ್ಟು ಅಮಾಯಕರಲ್ಲ. ನಾವು ತತ್ವದ ಮೇಲೆ ನಂಬಿಕೆ ಇಟ್ಟವರು. ನಾನು ವಿನಂತಿ ಮಾಡೋದು ಇಷ್ಟೇ. ದೇಶ ಮೊದಲು ಅಂತ ಕೆಲಸ ಮಾಡ್ತಿದ್ಧೇವೆ. ಮೋದಿ ಅವರ ಚಿತ್ರ ಕಣ್ಮುಂದೆ ಬರಬೇಕು, ಆ ಕಾರಣಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ ಎಂದರು.
"Saffron is the colour that has inspired all of us. It is not just colour, it has a legacy of 1,000 years," said former BJP minister CT Ravi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm