ಬ್ರೇಕಿಂಗ್ ನ್ಯೂಸ್
23-11-20 03:03 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 23: ರಾಜ್ಯದಲ್ಲಿ ಚಳಿ ಶುರುವಾಗಿರುವುದರಿಂದ ಸದ್ಯಕ್ಕೆ ಶಾಲೆ ಆರಂಭಿಸದೇ ಇರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣಾಧಿಕಾರಿಗಳು ಮತ್ತು ಉನ್ನತ ಮಟ್ಟದ ತಜ್ಞರ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸದ್ಯಕ್ಕೆ ಶಾಲೆ ತೆರೆಯುವುದು ಬೇಡ ಎನ್ನುವ ಸಲಹೆ ಕೇಳಿಬಂದಿದೆ. ಡಿಸೆಂಬರ್ ನಲ್ಲಿ ಚಳಿ ಇರುವುದರಿಂದ ಈ ವೇಳೆಗೆ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ಪೋಷಕರು ಮತ್ತು ಮಕ್ಕಳ ಆತಂಕದ ನಡುವೆ ಶಾಲೆ ಆರಂಭಿಸುವುದು ಬೇಡ ಎನ್ನುವ ಬಗ್ಗೆ ಸಭೆಯಲ್ಲಿ ಸಚಿವರು ನಿರ್ಣಯ ಕೈಗೊಂಡಿದ್ದಾರೆ.
ಡಿಸೆಂಬರ್ ಕೊನೆಯ ವಾರದಲ್ಲಿ ಮತ್ತೆ ಸಭೆ ನಡೆಸಿ, ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಭೆಯ ಬಳಿಕ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಶಿಕ್ಷಣ ಇಲಾಖೆಯ ತಾಂತ್ರಿಕ ಸಮಿತಿ ವರದಿ ನೀಡಿದ್ದು, ಒಂದರಿಂದ 8ನೇ ತರಗತಿ ವರೆಗೆ ಈ ವರ್ಷ ಶಾಲೆ ತೆರೆಯುವುದು ಬೇಡ. ಜೊತೆಗೆ, 9ರಿಂದ ಪಿಯುಸಿ ವರೆಗೆ ಶಾಲೆ ತೆರೆಯಬೇಕೆಂಬ ಇಂಗಿತ ಇದೆ. ಆದರೆ, ಸದ್ಯಕ್ಕೆ ಚಳಿ ಇರುವುದರಿಂದ ಇಂಥ ಪರಿಸ್ಥಿತಿಯಲ್ಲಿ ಶಾಲೆ ಆರಂಭಿಸುವುದು ಬೇಡ ಎಂದು ನಿರ್ಧರಿಸಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಹೀಗಾಗಿ ಈ ಬಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಂಟನೇ ತರಗತಿ ಮಕ್ಕಳು ಶಾಲೆಗೆ ಹೋಗದೇ ಪಾಸ್ ಆಗುವುದು ಖಚಿತ ಆಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರಮುಖ ಘಟ್ಟ ಆಗಿರುವುದರಿಂದ ಕೊನೆಯ ವೇಳೆಗೆ ಶಾಲೆ ತೆರೆದು ಮಕ್ಕಳಿಗೆ ಪಾಠ ಮಾಡಿಸಲು ಮತ್ತು ವಿಳಂಬವಾದರೂ ಪರೀಕ್ಷೆ ಬರೆಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಣಯ ಕೈಗೊಂಡಿದ್ದಾರೆ.
ಚಂದನ ವಾಹಿನಿಯಲ್ಲಿ 1ರಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ದಿನವೂ ಪಾಠ ಮಾಡಲಾಗುತ್ತಿದೆ. ಮಕ್ಕಳು ಅದನ್ನು ನೋಡಿ ಕಲಿಯಬೇಕೆಂದು ಸಚಿವರು ಸಲಹೆ ಮಾಡಿದ್ದಾರೆ.
The Karnataka government Monday decided not to reopen schools and pre-university colleges on December 1. According to Chief Minister B S Yediyurappa, the government “shall review the Covid-19 situation during the third week of December” to decide when to resume offline classes.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm