ಬ್ರೇಕಿಂಗ್ ನ್ಯೂಸ್
08-02-24 10:22 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 08: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಪರ್ಸೆಂಟ್ ಕಮಿಷನ್ ಆರೋಪ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆ ಸಮಯದಲ್ಲಿ ಕಾಂಗ್ರೆಸ್ ನಾಯಕರು ದೊಡ್ಡ ಹೋರಾಟವನ್ನೇ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧವೂ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪರ್ಸೆಂಟೇಜ್ ಬಾಂಬ್ ಸಿಡಿಸಿದ್ದಾರೆ.
ಗುರುವಾರ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದಲ್ಲಿ ಮಾತನಾಡಿದ ಅವರು, ''ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದರು. ಬಿಜೆಪಿ ಬಳಿಕ, ಕಾಂಗ್ರೆಸ್ ಸರ್ಕಾರದಲ್ಲೂ 40 ಪರ್ಸೆಂಟ್ ಕಮಿಷನ್ ಮುಂದುವರೆದಿದೆ. ಮೊದಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಸಕರು ನೇರವಾಗಿ ಹಣ ಕೇಳುತ್ತಿದ್ದರು. ಈಗ ಅಧಿಕಾರಿಗಳೇ ನೇರವಾಗಿ ಹಣ ಕೇಳುತ್ತಿದ್ದಾರೆ. ಪ್ರತಿ ಟೆಂಡರ್ನಲ್ಲೂ ಹಣ ಕೊಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸಂಬಂಧ ಸದ್ಯದಲ್ಲೇ ಅಧಿಕಾರಿಗಳು ಎಂಜಿನಿಯರ್ಗಳ ದಾಖಲೆ ಬಿಡುಗಡೆ ಮಾಡುವುದಾಗಿ'' ತಿಳಿಸಿದರು.
'ರಾಜ್ಯದ ಎಲ್ಲ ಇಲಾಖೆಯಲ್ಲೂ ಅಧಿಕಾರಿಗಳಿಂದಲೇ ಭ್ರಷ್ಟಾಚಾರದ ಬೇರೂರಿದೆ. ಹೆಜ್ಜೆ ಹೆಜ್ಜೆಗೂ ಮಿತಿಮೀರಿದ ಭ್ರಷ್ಟಾಚಾರಿ ಅಧಿಕಾರಿಗಳಿದ್ದಾರೆ. ಬಿಬಿಎಂಪಿ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಯಲ್ಲಿಯೂ ಭ್ರಷ್ಟ ಅಧಿಕಾರಿಗಳಿದ್ದಾರೆ'' ಎಂದು ಕೆಂಪಣ್ಣ ದೂರಿದರು.
''ಪ್ಯಾಕೇಜ್ ಸಿಸ್ಟಂ ಬಂದ್ ಮಾಡಿ ಪ್ರತ್ಯೇಕ ಟೆಂಡರ್ ಕರೆಯಬೇಕು. ಕೋಲಾರದಲ್ಲಿ ಪ್ಯಾಕೇಜ್ ಟೆಂಡರ್ ಕರೆದಿದ್ದಾರೆ. ಬೇರೆ ಜಿಲ್ಲೆಗಳಲ್ಲೂ ಕರೆಯಲಾಗಿದೆ. ಇದರಲ್ಲಿ ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಶುರುವಾಗಿದೆ. ಅಧಿಕಾರಿಗಳು ಹಣ ಕಲೆಕ್ಟ್ ಮಾಡಿ ರಾಜಕಾರಣಿಗಳಿಗೆ ಕೊಡುತ್ತಿದ್ದಾರೆ. ಈ ಹಿಂದೆ ರಾಜಕಾರಣಿಗಳು ನೇರವಾಗಿ ಕಮಿಷನ್ ತೆಗೆದುಕೊಳ್ಳುತ್ತಿದ್ದರು. ಈಗ ಅಧಿಕಾರಿಗಳು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ, ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಅನಾವಶ್ಯಕ ಪ್ಯಾಕೇಜ್ ಟೆಂಡರ್ ಕೂಡಲೇ ಸರ್ಕಾರ ರದ್ದುಗೊಳಿಸಬೇಕು'' ಎಂದು ಒತ್ತಾಯಿಸಿದರು.
''ವಿವಿಧ ಇಲಾಖೆಗಳ ಟೆಂಡರ್ ನೀಡಿರುವ ಕಾಮಗಾರಿ ಪೂರ್ಣಗೊಳಿಸಿ ಎರಡು ವರ್ಷಗಳೇ ಕಳೆದಿವೆ. ಹೀಗಾದರೂ ಹಣ ಬಿಡುಗಡೆ ಮಾಡಲು ಅಧಿಕಾರಿಗಳು ಮುಂದಾಗುತ್ತಿಲ್ಲ. ಶೇ.40 ಕಮಿಷನ್ ಆಸೆಯಲ್ಲಿರುವ ಅಧಿಕಾರಿಗಳ ವಿರುದ್ಧ ಸಮಯ ನೋಡಿ ದೂರು ನೀಡುತ್ತೇನೆ'' ಎಂದು ಹೇಳಿದರು.
ಸ್ವಯಂಪ್ರೇರಿತ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದ ಅಶ್ವತ್ಥನಾರಾಯಣ
ಕೆಂಪಣ್ಣ ಆರೋಪದ ಕುರಿತಂತೆ ಜಸ್ಟಿಸ್ ನಾಗಮೋಹನದಾಸ್ ಸಮಿತಿಯು ಸ್ವಯಂಪ್ರೇರಿತ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವ್ಯವಹಾರದ ಕುರಿತು ನ್ಯಾಯಮೂರ್ತಿ ನಾಗಮೋಹನ್ದಾಸ್ ಸಮಿತಿ ಮೂಲಕ ತನಿಖೆ ಮಾಡಿಸುವುದಾಗಿ ಕಾಂಗ್ರೆಸ್ ಸರ್ಕಾರ ಹೇಳಿತ್ತು. ನ್ಯಾ. ನಾಗಮೋಹನ್ದಾಸ್ ಅವರು ಕೆಂಪಣ್ಣ ಮಾಡಿದ ಆರೋಪಗಳ ಬಗ್ಗೆ ಸ್ವಯಂಪ್ರೇರಿತ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
Congress government is now involved in 40 percent comission after BJP slams Kempanna, President of Karnataka State Contractors Association
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am