ಬ್ರೇಕಿಂಗ್ ನ್ಯೂಸ್
10-02-24 03:17 pm HK News Desk ಕರ್ನಾಟಕ
ಶಿವಮೊಗ್ಗ, ಫೆ 10: ನಾನು ಡಿ.ಕೆ.ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಲ್ಲ. ಹೊಸ ಕಾನೂನು ತನ್ನಿ ಎಂದಿದ್ದಷ್ಟೆ. ಸದ್ಯ ನನ್ನ ಪುಣ್ಯ ನಾನು ದೇಶದ್ರೋಹಿ ಎಂದು ಯಾರು ಹೇಳಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಗೃಹ ಸಚಿವರೇ ಈ ಬಗ್ಗೆ ಗಮನಹರಿಸಿ ಕೇಸ್ ದಾಖಲಿಸಿ. ನಾನು ಕೇಂದ್ರ ಗೃಹಮಂತ್ರಿಗೆ ನಾನು ಪತ್ರ ಬರೆಯುತ್ತೇನೆ. ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿಯೆಂದು ನಾನು ಪತ್ರ ಬರೆಯುತ್ತೇನೆ. ಪ್ರಧಾನಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಕೇಂದ್ರಕ್ಕೆ ಪತ್ರ ಬರೆಯಲು ಪರಮೇಶ್ವರ್ ಹೇಳಿದ್ದಾರೆ, ಹಾಗಾಗಿ ಕೇಂದ್ರಕ್ಕೆ ನಾನು ಪತ್ರ ಬರೆಯುತ್ತೇನೆ ಎಂದರು.
ದಾವಣಗೆರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರ ದ್ರೋಹಿಗಳ ಗುಂಡಿಕ್ಕಿ ಕೊಲ್ಲುವ ಕಾನೊನು ತರುವಂತೆ ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ದಾವಣಗೆರೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಇಂದು ದಾವಣಗೆರೆ ಪೊಲೀಸರಿಂದ ಈಶ್ವರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಶಿವಮೊಗ್ಗದ ಈಶ್ವರಪ್ಪ ಅವರ ನಿವಾಸಕ್ಕೆ ಬಂದಿದ್ದ ದಾವಣಗೆರೆ ಬಡಾವಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಈಶ್ವರಪ್ಪ, ದಾವಣಗೆರೆ ಪೊಲೀಸರು ನೋಟಿಸ್ ಕೊಟ್ಟಿರುವುದು ಹೌದು. ಎಫ್ ಐಆರ್ ಹಾಕಿರುವುದು ಸತ್ಯ. ನನ್ನ ಮೇಲೆ ನೂರು ಎಫ್ಐಆರ್ ಹಾಕಿದರೂ ಕೂಡಾ ಹೆದರುವುದಿಲ್ಲ. ಎಫ್ಐಆರ್ ಹಾಕಿದರೂ ನಾನು ಈವರೆಗೂ ಒಂದು ರೂಪಾಯಿ ಫೈನ್ ಕಟ್ಟಿಲ್ಲ ಎಂದರು.
ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ ಈಶ್ವರಪ್ಪ ಅವರು, ಮಲ್ಲಿಕಾರ್ಜುನ ಖರ್ಗೆ ಹೊಟ್ಟೆಯೊಳಗೆ ಇಂತಹ ಕೆಟ್ಟ ಹುಳ ಹುಟ್ಟಿದೆ. ಅವನಿಗೆ ತಳಬುಡ ಗೊತ್ತಿಲ್ಲ. ಏನೇನು ಮಾತಾನಾಡುತ್ತಾನೆ. ಪ್ರಿಯಾಂಕ್ ಖರ್ಗೆಯನ್ನು ಕಾಂಗ್ರೆಸ್ ನಾಯಕನೆಂದು ಕರೆಯಲು ಇಷ್ಟಪಡುವುದಿಲ್ಲ ಎಂದರು.
K S Eshwarappa calls Priyank Kharge a dirty worm born from Mallikarjun Kharge, says no worries even for 100 FIRS. Senior BJP leader KS Eshwarappa had once again stirred a row, calling for a law that enables the killing of Congress MP DK Suresh and MLA Vinay Kulkarni. Calling the two leaders "traitors", Mr Eshwarappa claimed that they want to divide India into pieces.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm