ಬ್ರೇಕಿಂಗ್ ನ್ಯೂಸ್
10-02-24 03:17 pm HK News Desk ಕರ್ನಾಟಕ
ಶಿವಮೊಗ್ಗ, ಫೆ 10: ನಾನು ಡಿ.ಕೆ.ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಲ್ಲ. ಹೊಸ ಕಾನೂನು ತನ್ನಿ ಎಂದಿದ್ದಷ್ಟೆ. ಸದ್ಯ ನನ್ನ ಪುಣ್ಯ ನಾನು ದೇಶದ್ರೋಹಿ ಎಂದು ಯಾರು ಹೇಳಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಗೃಹ ಸಚಿವರೇ ಈ ಬಗ್ಗೆ ಗಮನಹರಿಸಿ ಕೇಸ್ ದಾಖಲಿಸಿ. ನಾನು ಕೇಂದ್ರ ಗೃಹಮಂತ್ರಿಗೆ ನಾನು ಪತ್ರ ಬರೆಯುತ್ತೇನೆ. ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿಯೆಂದು ನಾನು ಪತ್ರ ಬರೆಯುತ್ತೇನೆ. ಪ್ರಧಾನಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಕೇಂದ್ರಕ್ಕೆ ಪತ್ರ ಬರೆಯಲು ಪರಮೇಶ್ವರ್ ಹೇಳಿದ್ದಾರೆ, ಹಾಗಾಗಿ ಕೇಂದ್ರಕ್ಕೆ ನಾನು ಪತ್ರ ಬರೆಯುತ್ತೇನೆ ಎಂದರು.

ದಾವಣಗೆರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರ ದ್ರೋಹಿಗಳ ಗುಂಡಿಕ್ಕಿ ಕೊಲ್ಲುವ ಕಾನೊನು ತರುವಂತೆ ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ದಾವಣಗೆರೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಇಂದು ದಾವಣಗೆರೆ ಪೊಲೀಸರಿಂದ ಈಶ್ವರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಶಿವಮೊಗ್ಗದ ಈಶ್ವರಪ್ಪ ಅವರ ನಿವಾಸಕ್ಕೆ ಬಂದಿದ್ದ ದಾವಣಗೆರೆ ಬಡಾವಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಈಶ್ವರಪ್ಪ, ದಾವಣಗೆರೆ ಪೊಲೀಸರು ನೋಟಿಸ್ ಕೊಟ್ಟಿರುವುದು ಹೌದು. ಎಫ್ ಐಆರ್ ಹಾಕಿರುವುದು ಸತ್ಯ. ನನ್ನ ಮೇಲೆ ನೂರು ಎಫ್ಐಆರ್ ಹಾಕಿದರೂ ಕೂಡಾ ಹೆದರುವುದಿಲ್ಲ. ಎಫ್ಐಆರ್ ಹಾಕಿದರೂ ನಾನು ಈವರೆಗೂ ಒಂದು ರೂಪಾಯಿ ಫೈನ್ ಕಟ್ಟಿಲ್ಲ ಎಂದರು.
ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ ಈಶ್ವರಪ್ಪ ಅವರು, ಮಲ್ಲಿಕಾರ್ಜುನ ಖರ್ಗೆ ಹೊಟ್ಟೆಯೊಳಗೆ ಇಂತಹ ಕೆಟ್ಟ ಹುಳ ಹುಟ್ಟಿದೆ. ಅವನಿಗೆ ತಳಬುಡ ಗೊತ್ತಿಲ್ಲ. ಏನೇನು ಮಾತಾನಾಡುತ್ತಾನೆ. ಪ್ರಿಯಾಂಕ್ ಖರ್ಗೆಯನ್ನು ಕಾಂಗ್ರೆಸ್ ನಾಯಕನೆಂದು ಕರೆಯಲು ಇಷ್ಟಪಡುವುದಿಲ್ಲ ಎಂದರು.
K S Eshwarappa calls Priyank Kharge a dirty worm born from Mallikarjun Kharge, says no worries even for 100 FIRS. Senior BJP leader KS Eshwarappa had once again stirred a row, calling for a law that enables the killing of Congress MP DK Suresh and MLA Vinay Kulkarni. Calling the two leaders "traitors", Mr Eshwarappa claimed that they want to divide India into pieces.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm