ಬ್ರೇಕಿಂಗ್ ನ್ಯೂಸ್
13-02-24 03:01 pm HK News Desk ಕರ್ನಾಟಕ
ಕೊಡಗು, ಫೆ.13: ರಸ್ತೆ ಅಪಘಾತಕ್ಕೆ ತಾನೇ ಕಾರಣ ಎಂದು ಬೈಕ್ ಸವಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯನ್ನು ಮಡಿಕೇರಿ ಸಮೀಪದ ಹೆರವನಾಡಿನ ನಿವಾಸಿ ಹೆಚ್.ಡಿ.ತಮ್ಮಯ್ಯ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿ ಹಾಗೂ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಧನಲ್ ಸುಬ್ಬಯ್ಯ ಎಂದು ತಿಳಿದುಬಂದಿದೆ. ಅಪಘಾತ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಏನಿದು ಘಟನೆ:
ಶುಕ್ರವಾರ ಮಡಿಕೇರಿ ಚೈನ್ ಗೇಟ್ ಬಳಿ ಬೈಕ್ ಸವಾರರ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಸಂದರ್ಭದಲ್ಲಿ ಲಾರಿಯೊಂದು ವಿದ್ಯಾರ್ಥಿ ಧನಲ್ ಮೇಲೆ ಹರಿದಿತ್ತು. ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಅಪಘಾತಕ್ಕೆ ತಾನೇ ಕಾರಣ ಎಂದು ತಮ್ಮಯ್ಯ ತೀವ್ರ ನೊಂದಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಧನಲ್ ಸುಬ್ಬಯ್ಯ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಸುಮಾರು 3 ಗಂಟೆಗೆ ಸಾವನ್ನಪ್ಪಿದ್ದಾರೆ. ಈ ಅಪಘಾತಕ್ಕೆ ತಾನೇ ಕಾರಣ ಎಂದು ಮನನೊಂದು ತಮ್ಮಯ್ಯ ಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ತೀವ್ರ ಮನನೊಂದಿದ್ದ ತಮ್ಮಯ್ಯ ಎರಡು ದಿನಗಳಿಂದ ಊಟವನ್ನೂ ಮಾಡದೇ ಕೊರಗುತ್ತಿದ್ದರು.
ಆತ್ಮಹತ್ಯೆ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Man commits suicide for being the reason for the death of college student by accident. Kodagu resident thammaiah commits suicide after knowing the news of the death of young boy who died of accident caused by him.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am