ಬ್ರೇಕಿಂಗ್ ನ್ಯೂಸ್
13-02-24 11:02 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಅಕ್ರಮ ಆಸ್ತಿ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶಾಕ್ ಎದುರಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐರ್ ದಾಖಲಿಸಿದ್ದಾರೆ. ಸಿಬಿಐನಲ್ಲಿದ್ದ ಪ್ರಕರಣದ ಮರು ತನಿಖೆಗೆ ಲೋಕಾಯುಕ್ತ ಮುಂದಾಗಿದ್ದು, ಡಿಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಪೂರ್ವಾನುಮತಿಯನ್ನು ಸರ್ಕಾರ ಕಳೆದ ನವೆಂಬರ್ ತಿಂಗಳಲ್ಲಿ ವಾಪಸ್ ತೆಗೆದುಕೊಂಡಿತ್ತು. ಈ ಹಿನ್ನೆಲೆ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ರಾಜ್ಯ ಸರ್ಕಾರ ಡಿಸೆಂಬರ್ 22ರಂದೇ ಲೋಕಾಯುಕ್ತ ಡಿಜಿಪಿಗೆ ಪತ್ರ ಬರೆದು ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆದರೆ, ಇಲ್ಲಿಯವರೆಗೂ ಎಫ್ಐಆರ್ ದಾಖಲಾಗಿದ್ದಿಲ್ಲ. ಈಗ ಒಂದೂವರೆ ತಿಂಗಳ ಬಳಿಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ, ಇದುವರೆಗೂ ಯಾವುದೇ ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ಲೋಕಾಯುಕ್ತಕ್ಕೆ ನೀಡಿಲ್ಲ. ಸಿಬಿಐ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು, ತನಿಖೆ ಮುಗಿಯುವ ಹಂತದಲ್ಲಿದ್ದು ತನಿಖೆಗೆ ನೀಡಿರುವ ಅನುಮತಿ ವಾಪಸ್ ತೆಗೆದುಕೊಳ್ಳುವುದು ಸರಿಯಲ್ಲ ಎಂದು ವಾದಿಸಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿತ್ತು. ಆದರೆ, ನವೆಂಬರ್ 23, 2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ವಾಪಸ್ ತೆಗೆದುಕೊಳ್ಳಲಾಗಿತ್ತು. ಈ ಹಿಂದಿನ ಸರ್ಕಾರದಲ್ಲಿ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಲಾಗಿದೆ. ಅದು ಕಾನೂನು ಪ್ರಕಾರ ಸರಿಯಲ್ಲ ಎಂದು ಹೇಳಿ ಅನುಮತಿ ನಿರಾಕರಿಸಿತ್ತು.
Deputy Chief Minister D.K. Shivakumar is in for a shock. The Lokayukta police have registered an FIR against DK Shivakumar. DK Shivakumar is facing another crisis as the Lokayukta has decided to re-investigate the case in the CBI.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm