ಬ್ರೇಕಿಂಗ್ ನ್ಯೂಸ್
13-02-24 11:02 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಅಕ್ರಮ ಆಸ್ತಿ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶಾಕ್ ಎದುರಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐರ್ ದಾಖಲಿಸಿದ್ದಾರೆ. ಸಿಬಿಐನಲ್ಲಿದ್ದ ಪ್ರಕರಣದ ಮರು ತನಿಖೆಗೆ ಲೋಕಾಯುಕ್ತ ಮುಂದಾಗಿದ್ದು, ಡಿಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಪೂರ್ವಾನುಮತಿಯನ್ನು ಸರ್ಕಾರ ಕಳೆದ ನವೆಂಬರ್ ತಿಂಗಳಲ್ಲಿ ವಾಪಸ್ ತೆಗೆದುಕೊಂಡಿತ್ತು. ಈ ಹಿನ್ನೆಲೆ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ರಾಜ್ಯ ಸರ್ಕಾರ ಡಿಸೆಂಬರ್ 22ರಂದೇ ಲೋಕಾಯುಕ್ತ ಡಿಜಿಪಿಗೆ ಪತ್ರ ಬರೆದು ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆದರೆ, ಇಲ್ಲಿಯವರೆಗೂ ಎಫ್ಐಆರ್ ದಾಖಲಾಗಿದ್ದಿಲ್ಲ. ಈಗ ಒಂದೂವರೆ ತಿಂಗಳ ಬಳಿಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ, ಇದುವರೆಗೂ ಯಾವುದೇ ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ಲೋಕಾಯುಕ್ತಕ್ಕೆ ನೀಡಿಲ್ಲ. ಸಿಬಿಐ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು, ತನಿಖೆ ಮುಗಿಯುವ ಹಂತದಲ್ಲಿದ್ದು ತನಿಖೆಗೆ ನೀಡಿರುವ ಅನುಮತಿ ವಾಪಸ್ ತೆಗೆದುಕೊಳ್ಳುವುದು ಸರಿಯಲ್ಲ ಎಂದು ವಾದಿಸಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿತ್ತು. ಆದರೆ, ನವೆಂಬರ್ 23, 2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ವಾಪಸ್ ತೆಗೆದುಕೊಳ್ಳಲಾಗಿತ್ತು. ಈ ಹಿಂದಿನ ಸರ್ಕಾರದಲ್ಲಿ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಲಾಗಿದೆ. ಅದು ಕಾನೂನು ಪ್ರಕಾರ ಸರಿಯಲ್ಲ ಎಂದು ಹೇಳಿ ಅನುಮತಿ ನಿರಾಕರಿಸಿತ್ತು.
Deputy Chief Minister D.K. Shivakumar is in for a shock. The Lokayukta police have registered an FIR against DK Shivakumar. DK Shivakumar is facing another crisis as the Lokayukta has decided to re-investigate the case in the CBI.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm