ಬ್ರೇಕಿಂಗ್ ನ್ಯೂಸ್
14-02-24 06:54 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕರ್ನಾಟಕ ರಾಜ್ಯ ತೀವ್ರ ಬರಗಾಲದಲ್ಲಿದ್ದು ರೈತರಿಗೆ ಪರಿಹಾರ ಕೊಡಲು ಹಣ ಇಲ್ಲದಿದ್ದಾಗ ಸ್ಪೀಕರ್ ಯು.ಟಿ. ಖಾದರ್ ಓಡಾಟಕ್ಕೆ ಹೊಸ ದುಬಾರಿ ಫಾರ್ಚುನರ್ ಕಾರು ಬೇಕಿತ್ತಾ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.
ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಓಡಾಟಕ್ಕೆ ಹೊಸ ಮಾದರಿಯ, ಕಪ್ಪು ಬಣ್ಣದ ಐಷಾರಾಮಿ ಫಾರ್ಚೂನರ್ ಕಾರು ಖರೀದಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ‘ದುಂದುವೆಚ್ಚಗಳನ್ನು ಕಡಿಮೆ ಮಾಡಿ, ಇರುವ ವಾಹನವನ್ನೇ ಮಾರ್ಪಾಡು ಮಾಡಿಕೊಂಡು ಬಳಸಿ ಬೊಕ್ಕಸಕ್ಕೆ ಹೊರೆಯಾಗದೆ ಇರುವ ಹಾಗೆ ಮಾಡಿ ಮೇಲ್ಪಂಕ್ತಿ ಹಾಕಿ ಕೊಡಬೇಕಾಗಿದ್ದ ಸಭಾಧ್ಯಕ್ಷರು ಐಷಾರಾಮಿ ಕಾರನ್ನು ಖರೀದಿ ಮಾಡುವ ಅವಶ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಅಲ್ಲದೆ, ರಾಜ್ಯ ಭೀಕರ ಬರದಿಂದ ಕಂಗೆಟ್ಟಿರುವ ಸಂದರ್ಭದಲ್ಲಿ 223 ತಾಲೂಕುಗಳು ಬರ ಪೀಡಿತವೆಂದು ಸರ್ಕಾರವೇ ಘೋಷಣೆ ಮಾಡಿರುವಾಗ ಈ ರೀತಿಯಾದ ಅನುತ್ಪಾದಕ ವೆಚ್ಚಗಳಿಗೆ ಕಡಿವಾಣ ಹಾಕಬೇಕಿತ್ತು ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಯು.ಟಿ. ಖಾದರ್ ಅವರಿಗೆ ವಿಧಾನಸಭೆ ಸಚಿವಾಲಯದಿಂದ ಹೊಸ ಕಾರು (ಕೆಎ 11 ಜಿಎ 1) ಒದಗಿಸಲಾಗಿದ್ದು, ವಿಶೇಷ ವಿನ್ಯಾಸ ಮಾಡಿರುವುದರಿಂದ 41 ಲಕ್ಷ ವೆಚ್ಚ ಆಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
360 ಡಿಗ್ರಿ ಕ್ಯಾಮೆರಾ, ಪ್ರಯಾಣದ ಸಂದರ್ಭದಲ್ಲಿ ಮುಂದಿನ ಸೀಟಿನಲ್ಲಿ ಕುಳಿತುಕೊಳ್ಳುವವರ ಮುಖಕ್ಕೆ ಬೆಳಕು ನೀಡುವ ವಿಶೇಷ ಎಲ್ಇಡಿ ಲೈಟ್ ಸೌಲಭ್ಯವನ್ನು ಈ ಕಾರು ಹೊಂದಿದ್ದು, ಜಿಆರ್ ಕಿಟ್ ಅಳವಡಿಸುವ ಮೂಲಕ ಕಾರಿಗೆ ವಿಶೇಷ ವಿನ್ಯಾಸ ಕೂಡ ಮಾಡಲಾಗಿದೆ. ಕಾರು ಮುಂಭಾಗ ಹಾಗೂ ಹಿಂಭಾಗದಲ್ಲಿ ಗಂಡಭೇರುಂಡ ಲಾಂಛನ ಹೊಂದಿದ್ದು, ರಾಜ್ಯಪಾಲರ ಹೊರತಾಗಿ ವಿಧಾನ ಸಭಾಧ್ಯಕ್ಷರಿಗೆ ಮಾತ್ರ ಈ ಲಾಂಛನ ಅಳವಡಿಸಲು ಅವಕಾಶವಿದೆ.
Karnataka Assembly Speaker U.T. Khader on Friday said that the state is reeling under severe drought and there is no money to pay compensation to farmers. BJP MLA Basanagouda Patil Yatnal questioned whether Khader needed a new expensive Fortuner car to drive.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm