ಬ್ರೇಕಿಂಗ್ ನ್ಯೂಸ್
14-02-24 08:42 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ರಾಜ್ಯಸಭಾ ಚುನಾವಣೆಗೆ ರಾಜ್ಯದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕದಿಂದ ಹಾಲಿ ರಾಜ್ಯಸಭಾ ಸದಸ್ಯರಾದ ನಾಸೀರ್ ಹುಸೇನ್ ಹಾಗೂ ಬಿಸಿ ಚಂದ್ರಶೇಖರ್ಗೆ ಕಾಂಗ್ರೆಸ್ ಮತ್ತೊಮ್ಮೆ ಅವಕಾಶ ನೀಡಿದೆ. ಇದರ ಜೊತೆಗೆ, ಎಐಸಿಸಿ ಖಜಾಂಚಿ ಅಜಯ್ ಮಾಕೆನ್ ಅವರಿಗೂ ಕರ್ನಾಟಕದಿಂದ ಆಯ್ಕೆಗೆ ಅವಕಾಶ ನೀಡಲಾಗಿದೆ.
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿಯಿರುವಂತೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಮಾಜಿ ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಹಾಗೂ ಕಾಂಗ್ರೆಸ್ ನಾಯಕ ಬಿ.ಎಲ್ ಶಂಕರ್ ಅವರ ಹೆಸರು ರಾಜ್ಯಸಭಾ ಟಿಕೆಟ್ಗೆ ಕೇಳಿಬಂದಿತ್ತು. ಆದರೆ, ಕಾಂಗ್ರೆಸ್ ಹಾಲಿ ರಾಜ್ಯಸಭಾ ಸದಸ್ಯರಿಗೇ ಮತ್ತೆ ಮಣೆಹಾಕಿದೆ. ಅಭಿಷೇಕ್ ಮನು ಸಿಂಘ್ವಿ ಅವರಿಗೆ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.
ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ವಿಧಾನಸಭೆಯ ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ ನಿರಾಯಾಸವಾಗಿ ಮೂರು ಸ್ಥಾನಗಳನ್ನು ಗೆಲ್ಲಲಿದೆ. ಒಂದು ಸ್ಥಾನ ಬಿಜೆಪಿ ಪಾಲಾಗಲಿದೆ. ಈ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕದಿಂದ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ತೆಲಂಗಾಣದಲ್ಲಿ ರೇಣುಕಾ ಚೌಧರಿ, ಅನಿಲ್ಕುಮಾರ್ ಯಾದವ್ ಅವರಿಗೆ ಟಿಕೆಟ್ ನೀಡಿದ್ದರೆ, ಮಧ್ಯಪ್ರದೇಶದಲ್ಲಿ ಅಶೋಕ್ ಸಿಂಗ್ ಅವರಿಗೆ ಕಾಂಗ್ರೆಸ್ ರಾಜ್ಯಸಭಾ ಟಿಕೆಟ್ ನೀಡಿದೆ. ಒಟ್ಟು 15 ರಾಜ್ಯಗಳಿಂದ 56 ರಾಜ್ಯಸಭೆ ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಯಲಿದೆ.
The Congress has announced the list of candidates for the Rajya Sabha elections from the state. The Congress has once again fielded sitting Rajya Sabha members Nasir Hussain and BC Chandrasekhar from Karnataka. In addition to this, AICC treasurer Ajay Maken has also been given a chance to be elected from Karnataka.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm