ಬ್ರೇಕಿಂಗ್ ನ್ಯೂಸ್
15-02-24 09:02 pm HK News Desk ಕರ್ನಾಟಕ
ಚಾಮರಾಜನಗರ, ಫೆ 15: ಪತ್ನಿ ಮಾಡಿದ ರೀಲ್ಸ್ನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮದಲ್ಲಿ ನಡೆದಿದೆ. ಕುಮಾರ್ (33) ಮೃತ ವ್ಯಕ್ತಿ. ಪತ್ನಿ ರೂಪಾ, ರೂಪಾಳ ಸೋದರಮಾವ ಗೋವಿಂದನ ವಿರುದ್ಧ ಮೃತನ ಸೋದರ ಮಹಾದೇವಸ್ವಾಮಿ ದೂರು ಕೊಟ್ಟಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಳೆದ 10 ರಂದು ರೂಪಾಳ ತವರು ಮನೆಯಾದ ಗುಂಡಾಪುರಕ್ಕೆ ಕುಮಾರ್ ಮತ್ತು ರೂಪಾ ಇಬ್ಬರು ತೆರಳಿದ್ದರು. ಒಂದು ದಿನ ಇದ್ದು ಕುಮಾರ್ ಮರುದಿನ ಪಿ.ಜಿ. ಪಾಳ್ಯಕ್ಕೆ ವಾಪಸ್ ಆಗಿದ್ದರೆ, ಪತ್ನಿ ರೂಪಾ ಮಾತ್ರ ಅಲ್ಲಿಯೇ ಉಳಿದುಕೊಂಡಿದ್ದರು. ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ಆತನ ಸಹೋದರಿ ಜೊತೆ ಸೇರಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಇದನ್ನು ಸ್ನೇಹಿತರು ಕುಮಾರನ ಗಮನಕ್ಕೆ ತಂದಿದ್ದರು. ತಕ್ಷಣ ಫೋನ್ ಪತ್ನಿಗೆ ಮಾಡಿದ್ದ ಕುಮಾರ್, ಈ ರೀತಿ ರೀಲ್ಸ್ಗಳನ್ನು ಏಕೆ ಮಾಡುತ್ತಿದ್ದಿ? ಬಿಟ್ಟುಬಿಡು ಎಂದಾಗ ಪತ್ನಿಯು, ನಾನು ಇರುವುದೇ ಹೀಗೆ, ನೀನೇಕೆ ವಯಸ್ಸಾದವರ ರೀತಿ ಇದ್ದೀಯಾ ಎಂದಿದ್ದಾಳೆ. ಇದರಿಂದ ದಂಪತಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಮನನೊಂದ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹನೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹನೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Chamarajanagar Husband commits suicide after fighting with wife in matter of reels.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm