ಬ್ರೇಕಿಂಗ್ ನ್ಯೂಸ್
15-02-24 09:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರ ವಿರುದ್ಧ ಕ್ರಮ ಜರುಗಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಶಾಲೆಯಲ್ಲಿ ಸಿಸ್ಟರ್ ಪ್ರಭ ಅವರು ಅಯೋಧ್ಯೆಯ ರಾಮ ಮಂದಿರ ಮಸೀದಿಯನ್ನು ಒಡೆದು ಕಟ್ಟಿದ್ದಾರೆ. ಕಲ್ಲಿನ ಕಟ್ಟಡ ನಿರ್ಮಿಸಿದ್ದಾರೆ. ಬಳೆ ತೊಡುವುದರಲ್ಲಿ ಪಾವಿತ್ರ್ಯತೆ ಇಲ್ಲ ಎಂದೆಲ್ಲ ಶಾಲಾ ಮಕ್ಕಳಿಗೆ ಹೇಳಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಈ ಮೂಲಕ ಮಕ್ಕಳನ್ನು ಮತಾಂತರಗೊಳಿಸುವ ಪ್ರಯತ್ನ ನಡೆದಿದೆ. ಈ ಕುರಿತು ಮಕ್ಕಳು ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಹಿಂದೂ ದೇವರು ಹಾಗೂ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದರಿಂದ ಶಾಸಕ ಭರತ್ ಶೆಟ್ಟಿ ಶಾಲೆಗೆ ಹೋಗಿ ದೂರು ನೀಡಿದ್ದಾರೆ ಎಂದರು.
ಈಗ ಯಾರೋ ವ್ಯಕ್ತಿ ಬಿಜೆಪಿಯ ಇಬ್ಬರು ಶಾಸಕರ ಮೇಲೆ ದೊಡ್ಡ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಸ್ಥಳದಲ್ಲೇ ಇಲ್ಲದಿದ್ದರೂ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಗೃಹ ಸಚಿವರು ಹೇಳುವಂತೆ, ದೂರು ಬಂದಿರುವುದರಿಂದ ಎಫ್ಐಆರ್ ದಾಖಲಾಗಿದೆ. ಇದಕ್ಕೂ ಎರಡು-ಮೂರು ದಿನಗಳ ಮುನ್ನವೇ ಪೋಷಕರು ದೂರು ನೀಡಿದ್ದರೂ ಅದು ದಾಖಲಾಗಿಲ್ಲ. ಆ ದೂರಿನ ಬಗ್ಗೆ ಪೊಲೀಸರು ಕ್ಯಾರೇ ಎನ್ನಲಿಲ್ಲ. ಕೋಮುಗಲಭೆ, ಪ್ರಧಾನಿಯವರನ್ನು ಹೀಯಾಳಿಸಿರುವುದಕ್ಕೆ ಯಾವುದೇ ಸೆಕ್ಷನ್ ದಾಖಲಿಸಿಲ್ಲ. ಆ ದೂರು ಬಾಕಿ ಇಟ್ಟು, ಒತ್ತಡದಿಂದ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗ ಕರ್ನಾಟಕ ಪೊಲೀಸರ ಗೂಂಡಾಗಿರಿ ಹಾಗೂ ದೌರ್ಜನ್ಯದ ರಾಜ್ಯವಾಗಿದೆ. ನಾನು ಹುಬ್ಬಳ್ಳಿಗೆ ಹೋದಾಗಲೂ ಅವಾಚ್ಯ ಪದ ಬಳಸಿದ್ದೇನೆಂದು ಪ್ರಕರಣ ದಾಖಲಾಗಿದೆ. ಹಿಂದೂಗಳ ವಿರುದ್ಧ ಸರ್ಕಾರ ನಡೆಸುತ್ತಿರುವ ದೌರ್ಜನ್ಯವನ್ನು ಸದನದಲ್ಲಿ ಖಂಡಿಸಲಾಗಿದೆ. ಕೂಡಲೇ ಸಿಸ್ಟರ್ ಪ್ರಭ ಅವರ ಮೇಲೆ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
Action should be taken against Sister Prabha of Jerosa School in Mangaluru for allegedly making derogatory remarks against Hindu culture.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm