ಬ್ರೇಕಿಂಗ್ ನ್ಯೂಸ್
19-02-24 10:27 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಎಂಬ ಕುವೆಂಪು ರಚಿತ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.
ವಸತಿ ಶಾಲೆಗಳಲ್ಲಿ ಘೋಷ ವಾಕ್ಯ ಬದಲಾವಣೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡು ಸಚಿವರು ಪ್ರಕಟಣೆ ನೀಡಿದ್ದಾರೆ, ಪ್ರಸ್ತುತ ಇರುವ ಘೋಷವಾಕ್ಯ ತೆಗೆದುಹಾಕುವ ಬಗ್ಗೆ ಯಾವುದೇ ಆದೇಶ ನೀಡಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಮಕ್ಕಳಲ್ಲಿ ಕಲಿಕೆಯ ದೃಷ್ಟಿಯಿಂದ ವೈಜ್ಞಾನಿಕತೆ, ವೈಚಾರಿಕತೆ ಮೂಡಿಸಲು ಜೊತೆಗೆ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಸಲಾಗಿದೆ. ಕೆಲವರು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ ಎಂಬ ಆಲೋಚನೆ ಮುಂದಿಟ್ಟಿದ್ದಾರೆ. ಈ ಆಲೋಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ. ದೈರ್ಯವಾಗಿ ಪ್ರಶ್ನಿಸಿ ಎಂದರೆ ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯ. ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದ ಇಲ್ಲಿ ಜರುಗಿರುವುದಿಲ್ಲ ಎಂದು ಹೇಳಿದ್ದಾರೆ.
ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯ ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು, ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No order has been issued to change the motto of residential schools, only the proposal Social Welfare Minister Mahadevappa clarifies.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 06:33 pm
HK News Staffer
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
21-04-26 10:02 pm
HK News Staffer
ಡಿಜಿಪಿ ಡಾ.ಎಂ.ಎ.ಸಲೀಂ ಮಂಗಳೂರಿಗೆ ; ವರ್ಗಾವಣೆ ಆಗಿದ...
21-04-26 03:13 pm
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm