ಬ್ರೇಕಿಂಗ್ ನ್ಯೂಸ್
20-02-24 12:53 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಸ್ಯಾಂಡಲ್ವುಟ್ ನಟ ಧ್ರುವ ಸರ್ಜಾ ಸೇರಿದಂತೆ 'ಮಾರ್ಟಿನ್' ಚಿತ್ರದ ಚಿತ್ರೀಕರಣಕ್ಕೆ ಬೆಂಗಳೂರಿನಿಂದ ಕಾಶ್ಮೀರಕ್ಕೆ ತೆರಳಿದ್ದ ಚಿತ್ರ ತಂಡದ ಸದಸ್ಯರು ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ವಿಮಾನ ಶ್ರೀನಗರ ನಿಲ್ದಾಣದಲ್ಲಿ ಇಳಿಯಲು ಪರದಾಡಿದ್ದು ಅಪಘಾತದ ಅನುಭವಕ್ಕೊಳಗಾಗಿ ಪ್ರಯಾಣಿಕರು ಒಂದು ಕ್ಷಣ ಗಾಬರಿ ಬಿದ್ದ ಘಟನೆ ನಡೆದಿದೆ.
ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡವು ಸೋಮವಾರ ಸಂಜೆ ಸಾಂಗ್ ಶೂಟಿಂಗ್ ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರಕ್ಕೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿತ್ತು. ಹವಾಮಾನ ವೈಪರೀತ್ಯದಿಂದ ಏಕಾಏಕಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಕಂಡುಬಂದಿದೆ. ಕೆಟ್ಟ ಹವಾಮಾನದಿಂದಾಗಿ ವಿಮಾನವನ್ನು ಲ್ಯಾಂಡಿಂಗ್ ಮಾಡೋದಕ್ಕೆ ಸಾಧ್ಯವಾಗದೇ ಪೈಲಟ್ ಪರದಾಟ ನಡೆಸಿದ್ದಾರೆ.


ಚಿತ್ರತಂಡದ ಸದಸ್ಯರು ಸೇರಿದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಭಯಕ್ಕೀಡಾಗಿದ್ದಾರೆ. ಕುಳಿತ ಸೀಟ್ ನಡುಗಿದ ಅನುಭವವಾಗಿದ್ದು ಕುಳಿತಿದ್ದ ಸ್ಥಳದಿಂದಲೇ ಪ್ರಯಾಣಿಕರು ದೇವರಿಗೆ ಕೈಮುಗಿದಿದ್ದಾರೆ. ಭಯಕ್ಕೀಡಾಗಿ ಕಣ್ಣೀರಿಟ್ಟಿದ್ದಾರೆ. ಕೊನೆಗೆ ಪೈಲಟ್ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಕೂಡಲೇ ಪ್ರಯಾಣಕರು ಗಾಬರಿಯಿಂದ ಹೊರಬಂದಿದ್ದು ಜೀವ ಉಳಿಯಿತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಅಪಾಯದಿಂದ ಪಾರಾದ ನಟ ಧ್ರುವ ಸರ್ಜಾ ತನಗಾದ ಅನುಭವದ ಬಗ್ಗೆ ವಿಡಿಯೋ ಮಾಡಿದ್ದು, " ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವಕ್ಕೀಡಾದೆ. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ " ಎಂದಿದ್ದಾರೆ. ಚಿತ್ರದ ನಿರ್ದೇಶಕ ಎ.ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ತಂಡದಲ್ಲಿದ್ದಾರೆ. ಪ್ರಾಣಾಪಾಯದಿಂದ ಪಾರಾದ ಖುಷಿಯಲ್ಲಿ ಎಲ್ಲರೂ ಜೈ ಆಂಜನೇಯ, ಜೈ ಶ್ರೀರಾಮ್ ಎಂದಿದ್ದಾರೆ.
Kannada Actor Dhruva Sarja And Martin Film Crew Narrowly Escaped The Plane Crash In Srinagar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm