ಬ್ರೇಕಿಂಗ್ ನ್ಯೂಸ್
20-02-24 10:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ವಿಧಾನಸಭೆ ಅಧಿವೇಶನದಲ್ಲಿ ಕೇಂದ್ರ ಸರಕಾರ ಅನುದಾನ ತಾರತಮ್ಯ ಮಾಡ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ಕೊಡುತ್ತಿದ್ದಾಗ, ಎದ್ದು ನಿಂತು ವಿರೋಧಿಸಿದ್ದಕ್ಕೆ ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರನ್ನು ಕಾಂಗ್ರೆಸ್ ಶಾಸಕರು ಹುಚ್ಚ ಎಂದು ರೇಗಿಸಿದ ಘಟನೆ ನಡೆದಿದೆ.
ಫುಡ್ ಕಾರ್ಪೊರೇಶನ್ ಕಡೆಯಿಂದ ನಾವು ಅಕ್ಕಿ ಕೇಳಿದ್ದೆವು. ಅದರ ಮ್ಯಾನೇಜರ್ ಓಕೆಯೆಂದು ಹೇಳಿದ್ದೂ ಆಗಿತ್ತು. ಆದರೆ ಕೇಂದ್ರ ಸರಕಾರದವರು ರಾಜಕೀಯ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದಾಗ, ವಿರೋಧಿಸಿದ ವಿಪಕ್ಷ ನಾಯಕ ಅಶೋಕ್, ನೀವು ಗ್ಯಾರಂಟಿ ಘೋಷಣೆ ಮಾಡಿದಾಗ ಕೇಂದ್ರವನ್ನು ಕೇಳಿದ್ರಾ.. ಆನಂತರ ಕೇಂದ್ರ ಅಕ್ಕಿ ಕೊಡಲಿಲ್ಲ ಎಂದರೆ ಹೇಗೆ. ಅಕ್ಕಿಯನ್ನು ಮ್ಯಾನೇಜರ್ ಕೊಡೋದಾ ಎಂದು ಛೇಡಿಸಿದರು.


ಪ್ರತಿಕ್ರಿಯಿಸಿದ ಸ್ಪೀಕರ್ ಯುಟಿ ಖಾದರ್, ಆಹಾರ ಭದ್ರತಾ ನಿಗಮ ಅನ್ನೋದು ಸ್ವತಂತ್ರ ಸಂಸ್ಥೆ ಎಂದು ಹೇಳಲು ಹೊರಟಾಗ ಎದ್ದು ನಿಂತ ವೇದವ್ಯಾಸ ಕಾಮತ್, ಸ್ವತಂತ್ರ ಸಂಸ್ಥೆಯಲ್ಲ. ಕೇಂದ್ರಕ್ಕೆ ಅಧಿಕಾರ ಇದೆಯೆಂದು ಹೇಳಲು ಹೊರಟರು. ಕಾಂಗ್ರೆಸ್ ಶಾಸಕರು ಅದಕ್ಕೆ ವಿರೋಧಿಸಿ ಗದ್ದಲ ಎಬ್ಬಿಸಿದ್ದಾರೆ. ಏಯ್ ಹುಚ್ಚಾ ಅವನು. ಹೊರಗೆ ಹಾಕಿ ಎಂದು ಕೂಗಿದ್ದಾರೆ. ಇದರಿಂದ ಕುಪಿತರಾದ ವೇದವ್ಯಾಸ್ ಅವರನ್ನು ಖಾದರ್ ಕುಳಿತುಕೊಳ್ಳುವಂತೆ ಮನವಿ ಮಾಡಿದ್ದಾರೆ. ಹುಚ್ಚ ನೀವು ಎಂದು ವೇದವ್ಯಾಸ್ ಹೇಳಿದ್ದಕ್ಕೆ ಖಾದರ್ ಗರಂ ಆಗಿದ್ದು ನೀವೊಮ್ಮೆ ಕೂತ್ಕೊಳ್ಳಿ ಮಾರ್ರೆ, ಸರಿಯಾಗಿ ತಿಳಿದುಕೊಳ್ಳದೆ ಮಾತಾಡಬೇಡಿ ಎಂದಿದ್ದಾರೆ.
ಇದನ್ನು ಕೇಳಿದ ಆಡಳಿತ ಪಕ್ಷದ ಸದಸ್ಯರು, ವೇದವ್ಯಾಸ ಗುರಿಯಾಗಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಭಾಧ್ಯಕ್ಷ ಪೀಠಕ್ಕೆ ಗೌರವ ಕೊಡಬೇಕಲ್ಲ. ಹುಚ್ಚ ಅಂತಾನೆ, ಅವನನ್ನು ಎತ್ತಿ ಹೊರಗೆ ಹಾಕ್ರೀ ಎಂದು ಗದ್ದಲ ಎಬ್ಬಿಸಿದ್ದಾರೆ. ಮುಖ್ಯಮಂತ್ರಿ ಮಾತಾಡೋವಾಗ ನಡುವೆ ಬಾಯಿ ಹಾಕ್ತಾನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಹುಚ್ಚ ಅವನು ಎಂದು ಹೇಳಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
MLA Vedavyas Kamath is mad, put him out, congress leaders assembly video goes viral. Congress leaders call him fool openly in the assembly
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm