ಬ್ರೇಕಿಂಗ್ ನ್ಯೂಸ್
21-02-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಬಿಟ್ ಕಾಯಿನ್ ಹಗರಣವನ್ನು ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಕೆದಕಲು ಆರಂಭಿಸಿದೆ. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಬುಧವಾರ ಮಧ್ಯಾಹ್ನ ವಿಚಾರಣೆಗೆ ಬರುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ಸಿಐಡಿ ಕಚೇರಿಗೆ ಹಾಜರಾದ ಸಂದೀಪ್ ಪಾಟೀಲ್, ಪ್ರಕರಣ ಸಂಬಂಧ ಕೆಲವು ಮಾಹಿತಿಗಳನ್ನು ಒದಗಿಸಿ ವಾಪಸಾಗಿದ್ದಾರೆ. ಸಂದೀಪ್ ಪಾಟೀಲ್ 2019- 20 ರಲ್ಲಿ ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಆಯುಕ್ತರಾಗಿದ್ದಾಗಲೇ ಬಿಟ್ ಕಾಯಿನ್ ಕೇಸ್ ಹೊರಬಂದಿತ್ತು. ಬಳಿಕ ಒಟ್ಟು ಪ್ರಕರಣವನ್ನು ಅಂದಿನ ಸಿಸಿಬಿ ಪೊಲೀಸರು ಮುಚ್ಚಿ ಹಾಕಿದ್ದಾರೆಂದು ಆರೋಪ ಕೇಳಿಬಂದಿತ್ತು. ಬಿಜೆಪಿ ಸರ್ಕಾರದ ಪ್ರಭಾವಿ ರಾಜಕಾರಣಿಗಳು ಹಗರಣದಲ್ಲಿ ಶಾಮೀಲಾಗಿದ್ದರಲ್ಲದೆ, ಪ್ರಮುಖ ಆರೋಪಿ ಶ್ರೀಕಿಯನ್ನು ಬಳಸಿ ಸರ್ಕಾರದ ಬೊಕ್ಕಸಕ್ಕೇ ಕೈಹಾಕಿದ್ದರು. ಹಲವು ವೆಬ್ ಸೈಟ್, ಅಮೆರಿಕದ ಬಿಟ್ ಕಾಯಿನ್ ಸಂಸ್ಥೆಗಳನ್ನು ಹ್ಯಾಕ್ ಮಾಡಿ ಬಿಟ್ ಕಾಯಿನ್ ಗಳನ್ನು ಕಳವು ಮಾಡಲಾಗಿತ್ತು.
ಕಾಂಗ್ರೆಸ್ ಪ್ರಕರಣದ ಹೆಚ್ಚಿನ ತನಿಖೆಗಾಗಿ ಎಸ್ಐಟಿ ತಂಡವನ್ನು ನೇಮಕ ಮಾಡಿತ್ತು. ಇತ್ತೀಚೆಗೆ ಆಗಿನ ಸಿಸಿಬಿ ತಂಡದ ಇಬ್ಬರು ಇನ್ಸ್ ಪೆಕ್ಟರ್ ಗಳನ್ನು ಬಂಧಿಸಿದ್ದ ತಂಡ ಇದೀಗ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದೆ. ಅಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಬಿಟ್ ಕಾಯಿನ್ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದರು. ಅಲ್ಲದೆ, ಸಿಸಿವಿ ತಂಡದ ಪ್ರಮುಖ ಅಧಿಕಾರಿಗಳೇ ಸಾಕ್ಷ್ಯ ನಾಶಪಡಿಸಿದ ಆರೋಪ ಎದುರಿಸುತ್ತಿದ್ದಾರೆ.
ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಪ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆಗೆ ಕರೆಸಿದ್ದರಿಂದ ಮುಂದಿನ ಹಂತದಲ್ಲಿ ರಾಜಕಾರಣಿಗಳನ್ನೂ ತನಿಖೆಗೆ ಕರೆಯುವ ಸಾಧ್ಯತೆಯಿದೆ. ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಯೊಬ್ಬರ ಹೆಸರೂ ಬಿಟ್ ಕಾಯಿನ್ ಹಗರಣದಲ್ಲಿ ಕೇಳಿಬಂದಿತ್ತು.
The Congress government has started raking up the bitcoin scam ahead of the Lok Sabha elections. Senior IPS officer Sandeep Patil has been questioned by the SIT probing the case.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am